Advertisement

80 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ: ಸಿ.ಎಂ.ಇಬ್ರಾಹಿಂ

01:09 PM Oct 24, 2022 | Team Udayavani |

ವಿಜಯಪುರ: ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದಾಗ ನಡೆಸಿದ ಸಮೀಕ್ಷೆ ಪ್ರಕಾರ 2023 ರ ಚುನವಣೆ ವೇಳೆಗೆ 80 ವಿಧಾನಸಬೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ. ಸಮೀಕ್ಷೆಯಲ್ಲಿ ಜೆಡಿಎಸ್ ಮುಂಚೂಣಿಯಲ್ಲಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ ಕುಟುಕಿದರು.

Advertisement

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಭಾರತ ಜೋಡೋ ಹೆಸರಿನಲ್ಲಿ ಸಮಯ ವ್ಯರ್ಥ ಪ್ರಯತ್ನ ಮಾಡುವ ಬದಲು ಪ್ರಾದೇಶಿಕ ಪಕ್ಷಕ್ಕಿಂತ ಹೀನಾಯ ಸ್ಥಿತಿಯಲ್ಲಿ ಇರುವ ಕಾಂಗ್ರೆಸ್ ಜೋಡೋ ಯಾತ್ರೆ ಮಾಬೇಕಿತ್ತು ಎಂದರು.

ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಜೀವಪಣಕ್ಕಿಟ್ಟು ಹೋರಾಡಿದ ಗುಲಾಂ ನಬಿ ಆಜಾದ್ ಸ್ಥಿತಿ ಈಗೇನಾಗಿದೆ. ಹೀಗಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ. ಸಿದ್ಧರಾಮಯ್ಯ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಭವಿಷ್ಯದಲ್ಲಿ ಉತ್ತರ ಪ್ರದೇಶದ ಅಖಿಲೇಶ ಯಾದವ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಅಧಿಕಾರಕ್ಕೆ ಬರಲಿದ್ದೇವೆ. ಪ್ರಾದೇಶಿಕ ಪಕ್ಷಗಳೆಲ್ಲ ಸೇರಿ 2023 ಕ್ಕೆ ದೆಹಲಿ ಕೆಂಪು ಕೋಟೆಯಲ್ಲೂ ರಾಷ್ಟ್ರಧ್ವಜ ಹಾರಿಸಲಿದ್ದೇವೆ ಎಂದರು.

ಇದನ್ನೂ ಓದಿ:ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

Advertisement

ದೇವೇಗೌಡರು ಪ್ರಧಾನಿ ಆಗಿದ್ದಾಗ ಆಲಮಟ್ಟಿ ಶಾಸ್ತ್ರೀ ಜಲಾಶಯದ ಗೇಟ್ ಎತ್ತರಿಸುವ ವಿಷಯದಲ್ಲಿ ಅಂಧ್ರಪ್ರದೇಶ ಮುಖ್ಯಮಂತ್ರಿ ಬೆಂಬಲ ಸರ್ಕಾರಕ್ಕೆ ನೀಡಿದ ವಾಪಸ್ ಪಡೆಯಯವುದಾಗಿ ಹೇಳಿದರೂ ಅಧಿಕಾರ ಬಿಟ್ಟರೆ ಹೊರತು, ರಾಜ್ಯದ ಜನರ ಹಿತ ಬಲಿಕೊಡಲಿಲ್ಲ. ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಾಗ ರೈತರ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂದು ಯಾತ್ರೆ ಮಾಡಿದವರು ಮಾಡಿದ್ದೇನು ಎಂಬುದನ್ನು ಜನತೆಯ ಮುಂದಿಡಲಿ ಎಂದು ಆಗ್ರಹಿಸಿದರು.

ಬಿಜೆಪಿ ಪಕ್ಷಕ್ಕೆ ಮೋದಿ ಚಿಂತೆ, ಕಾಂಗ್ರೆಸ್ ಪಕ್ಷಕ್ಕೆಗೆ ರಾಹುಲ್ ಚಿಂತೆ, ಜೆಡಿಎಸ್ ಪಕ್ಷಕ್ಕೆ ಮಾತ್ರ ರಾಜ್ಯದ ಚಿಂತೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಯಾತ್ರೆ, ಕಾರ್ಯಕ್ರಮ ಮಾಡುತ್ತಿವೆ. ಆದರೆ ಜನರಿಗೆ ತಾವು ಏನು ಮಾಡಿದ್ದೇವೆ, ಮಾಡುತ್ತೇವೆ ಎಂದು ಹೇಳುತ್ತಿಲ್ಲ. ಕೇವಲ ಪರ್ಸಂಟೇಜ್ ಗಾಗಿ ಕಿತ್ತಾಡುತ್ತಿವೆ ಎಂದು ದೂರಿದರು.

ನಮ್ಮ ಪಕ್ಷ ರಾಜ್ಯದ ಜನತೆಗಾಗಿ ಧ್ವನಿ ಎತ್ತುತ್ತಿದ್ದು, ನಾವು ಮಾಡುವ ಕಾರ್ಯಕ್ರಮಗಳೇನು ಎಂಬುದನ್ನು ಜನತೆಯ ಮುಂದೆ ಇಡುತ್ತಿದ್ದೇವೆ. ನಮಗೆ ಹೈಕಮಾಂಡ್ ಇಲ್ಲ, ಮೇಲಿನವರಿಗೆ ಹಣ ಕೊಡಬೇಕಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅವರ ಆಶಯದಂತೆ ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಎಂದರು.

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಂಚರತ್ನ ಯಾತ್ರೆ ಮೂಲಕ ಸಂಕಲ್ಪ ಮಾಡಿದೆ. ನವೆಂಬರ್ 1 ರಿಂದ ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಪಂಚರತ್ನ ಯಾತ್ರೆ ಆರಂಭಗೊಳ್ಳಲಿದೆ. ನಮ್ಮ ಸರ್ಕಾರ ರಾಜ್ಯದ ಜನತೆಯ ಆಶಯ ಈಡೇರಿಸದಿದ್ದಲ್ಲಿ ಮತ್ತೆ ಚುನಾವಣೆಯಲ್ಲಿ ಜನತೆಯ ಮುಂದೆ ಬರುವುದಿಲ್ಲ ಎಂದು ಕುಮಾರಸ್ವಾಮಿ ಶಪಥ ಮಾಡಿದ್ದಾರೆ ಎಂದರು.

ಇಂದಿರಾ ಗಾಂಧಿ ಬಿರುಗಾಳಿಯ ಮಧ್ಯೆಯೂ ಸಂಸ್ಥಾನ ಕಾಂಗ್ರೆಸ್ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಗೆಲುವು ಸಾಧಿಸಿತ್ತು. ವಿಜಯಪುರ ಜಿಲ್ಲೆಯ ಮಟ್ಟಿಗೆ ಜೆಡಿಎಸ್ ಭದ್ರಕೋಟೆ. ಕಳೆದ ಚುನಾವಣೆಯಲ್ಲಿ ರಾಜ್ಯದ ಜನರು 5 ಕ್ಷೇತ್ರದಲ್ಲಿ ಗೆಲ್ಲುವ ಹಂತದಲ್ಲಿ ಇದ್ದು, ಇಬ್ಬರು ಶಾಸಕರನ್ನು ಗೆಲ್ಲಿಸಿದ್ದಾರೆ. 2023 ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯಲ್ಲೂ 8 ಕ್ಷೇತ್ರ ಗೆಲ್ಲುವ ಮಟ್ಟಕ್ಕೆ ಪಕ್ಷದ ಸಂಘಟನೆ ನಡೆದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next