Advertisement

ಭರವಸೆ ಮೂಡಿಸುವ ಅಂಶಗಳೇ ಇಲ್ಲ: ಡಿ.ಕೆ.ಸುರೇಶ್‌

08:48 PM Feb 01, 2022 | Team Udayavani |

ಬೆಂಗಳೂರು:ಕೇಂದ್ರ ಬಜೆಟ್‌ನಲ್ಲಿ ಯಾವುದೇ ರೀತಿಯ ಭರವಸೆ ಮೂಡಿಸುವ ಅಂಶಗಳಿಲ್ಲ. ಈ ಬಜೆಟ್‌ ನಲ್ಲಿ ಉಪ್ಪು, ಉಳಿ, ಖಾರ ಯಾವುದೂ ಇಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದರು. ಕಳೆದ ಮೂರು ವರ್ಷಗಳಿಂದ ಕೋವಿಡ್‌ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಈ ಬಜೆಟ್‌ ಮೇಲೆ ಬಹಳ ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿತ್ತು. ಬಡವರು, ಮಧ್ಯಮವರ್ಗದವರ ತೆರಿಗೆ ಕಡಿಮೆ ಮಾಡುವ ಬಗ್ಗೆ ಪ್ರಸ್ತಾಪವೇ ಇಲ್ಲ ಎಂದು ತಿಳಿಸಿದ್ದಾರೆ.

ಬಜೆಟ್‌ ನಲ್ಲಿ ಚರ್ಚೆ ಮಾಡುವಂತಹ ಯಾವುದೇ ಅಂಶಗಳಿಲ್ಲ. ರಕ್ಷಣಾ ಕ್ಷೇತ್ರದಲ್ಲಿ ಆಂತರಿಕ ಉತ್ಪಾದನೆ, 60 ಲಕ್ಷ ಉದ್ಯೋಗ ಸೃಷ್ಟಿ ಬಗ್ಗೆ ಹೇಳಿದ್ದಾರೆ. ಆ ಮೂಲಕ ಪ್ರಧಾನ ಮಂತ್ರಿಗಳು ನಮಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡಲು ಸಾಧ್ಯವಾಗಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಇದೆಲ್ಲವನ್ನು ನೋಡಿದರೆ ಈ ಬಜೆಟ್‌ ನಲ್ಲಿ ಬರೀ ಸುಳ್ಳು ಭರವಸೆಗಳೇ ತುಂಬಿವೆ. ಸರ್ಕಾರ ಯಾವುದೇ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next