Advertisement

ರಾಜ್ಯದಲ್ಲಿ ಮೂರು ದಿನ ಒಣಹವೆ ಸಾಧ್ಯತೆ

11:06 PM May 03, 2019 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಮೂರು ದಿನ ಒಣಹವೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಫೋನಿ ಚಂಡಮಾರುತವು ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ಚಂಡಮಾರುತ ಶಕ್ತಿ ಕುಗ್ಗಿದೆ.

Advertisement

ಅದರ ಪ್ರಭಾವ ರಾಜ್ಯದ ಮೇಲೆ ಹೆಚ್ಚಾಗಿಲ್ಲ. ಜತೆಗೆ ರಾಜ್ಯದಲ್ಲಿ ಯಾವುದೇ ಮೇಲ್ಮೆ„ಸುಳಿಗಾಳಿ ಹಾಗೂ ಕಡಿಮೆ ಒತ್ತಡದ ತಗ್ಗು (ಟ್ರಫ್) ಇಲ್ಲದಿರುವುದರಿಂದ ಮುಂದಿನ ಮೂರು ದಿನ ರಾಜ್ಯಾದ್ಯಂತ ಒಣಹವೆ ಇರಲಿದೆ.

ಒಳನಾಡಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ಕರಾವಳಿ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next