Advertisement

ಈ ಬಾರಿಯ ಏರ್ ಶೋ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ: ರಾಜನಾಥ್ ಸಿಂಗ್

07:40 PM Jan 15, 2021 | Team Udayavani |

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ  ಇಂದು ವಿಧಾನಸೌಧದ ಸಮ್ಮೇಳನದಲ್ಲಿ ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.

Advertisement

ಏರೋ ಇಂಡಿಯಾ ಹಿನ್ನೆಲೆಯಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು ಈವರೆಗಿನ ಪ್ರಗತಿ ತೃಪ್ತಿ ತಂದಿದೆ. ಈ ಬಾರಿಯ ಏರ್ ಶೋ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ. ಕೋವಿಡ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ರಕ್ಷಣಾ ಸಚಿವ  ರಾಜನಾಥ ಸಿಂಗ್ ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಚಿವ ಸಂಪುಟ ಅಸಮಾಧಾನ: ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ ಎಂದ ನಳಿನ್

ಇದಕ್ಕೂ ಮುನ್ನ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯ ಮಂತ್ರಿಗಳ ಕೊಠಡಿಯಲ್ಲಿ ರಕ್ಷಣಾ ಮಂತ್ರಿಗಳನ್ನು ಸ್ವಾಗತಿಸಿದರು.

Advertisement

ಇದನ್ನೂ ಓದಿ: ನಾನು ಹಿಂದೂ-ಮುಸ್ಲಿಂ ಪರ, ದೇಶದ್ರೋಹಿಗಳ ಪರ ಅಲ್ಲ: ಸತೀಶಗೆ ಸಹೋದರ ರಮೇಶ್ ತಿರುಗೇಟು

Advertisement

Udayavani is now on Telegram. Click here to join our channel and stay updated with the latest news.

Next