Advertisement

ಕರಾವಳಿ, ಮಲೆನಾಡಿನಲ್ಲಿ ವ್ಯಾಪಕ ಮಳೆ ಸಾಧ್ಯತೆ 

06:55 AM Aug 27, 2018 | |

ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದ್ದು, ಕರಾವಳಿ ಮತ್ತು ಮಲೆನಾಡಿನ ಆಯ್ದ ಭಾಗಗಳಲ್ಲಿ ಮಾತ್ರ ಕೆಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾಯವ್ಯ ಮತ್ತು ಉತ್ತರದ ಒಡಿಶಾದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. 

Advertisement

ಆದರೆ, ಇದರ ಪ್ರಭಾವ ರಾಜ್ಯದ ಮೇಲೆ ಅಷ್ಟಾಗಿ ಇರುವುದಿಲ್ಲ. ಇದು ಅಲ್ಪಪ್ರಮಾಣದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಸುವ ನಿರೀಕ್ಷೆಯಿದೆ. ಮುಂದಿನ 2-3 ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌. ಪಾಟೀಲ ತಿಳಿಸಿದರು.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನ ಆಯ್ದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಶೇ.40 ಜಿಲ್ಲೆಗಳಲ್ಲಿ ಮಳೆ ಕೊರತೆ: ದಕ್ಷಿಣ ಭಾರತದಲ್ಲಿ ಹಲವೆಡೆ ಅತಿವೃಷ್ಟಿಯಿಂದ ಪ್ರವಾಹ ಉಂಟಾಗಿದ್ದರೆ, ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿದಂತೆ ಶೇ.40ರಷ್ಟು ಜಿಲ್ಲೆಗಳಲ್ಲಿ ಮಳೆಯೇ ಸರಿಯಾಗಿ ಸುರಿದಿಲ್ಲ! ಈ ಮುಂಗಾರು ಋತುವಿನಲ್ಲಿ ದಕ್ಷಿಣ ಭಾರತದ 125 ಜಿಲ್ಲೆಗಳ ಪೈಕಿ 54 ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ. ಇನ್ನೆರಡು ಜಿಲ್ಲೆಗಳಲ್ಲಿ ಭಾರೀ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಮಿಳುನಾಡು ಅತ್ಯಂತ ಹೆಚ್ಚು ಮಳೆ ಕೊರತೆ ಅನುಭವಿಸಿದ ರಾಜ್ಯವಾಗಿದೆ. ಇದರ 32 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ ಕಡಿಮೆ ಮಳೆ ಬಿದ್ದಿದೆ. ಕರ್ನಾಟಕದ 30ರಲ್ಲಿ 14 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದ್ದರೆ, ಎರಡು ಜಿಲ್ಲೆಗಳಲ್ಲಿ ತೀರಾ ಕೊರತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next