Advertisement
ಸಿ.ಟಿ. ರವಿ, ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ಮಧ್ಯೆ ಈ ಸ್ಥಾನಕ್ಕಾಗಿ ಪೈಪೋಟಿ ಸೃಷ್ಟಿಯಾಗಿದ್ದು, ಛಲವಾದಿ ನಾರಾಯಣಸ್ವಾಮಿ ಪರ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಬ್ಯಾಟಿಂಗ್ ಪ್ರಾರಂಭಿಸಿದ್ದಾರೆ. ಆದರೆ, ಕಾಂಗ್ರೆಸ್ನಿಂದ ವಲಸೆ ಬಂದವರಿಗೆ ಈ ಆಯಕಟ್ಟಿನ ಸ್ಥಾನ ಕೊಡಲು ಬಿಜೆಪಿ ವರಿಷ್ಠರು ಒಪ್ಪುವರೇ? ಎಂಬ ಪ್ರಶ್ನೆ ಉದ್ಭವವಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ವಿಧಾನಸಭೆ, ವಿಧಾನ ಪರಿಷತ್ ಎರಡೂ ಕಡೆ ಹಳೇ ಮೈಸೂರು ಭಾಗಕ್ಕೆ ಮಣೆ ಹಾಕಿದಂತಾಗುತ್ತದೆ.
ವಿಪಕ್ಷ ನಾಯಕ ಸ್ಥಾನದ ವಿಚಾರದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಅಳೆದೂ-ತೂಗಿ ಲೆಕ್ಕಾಚಾರ ಹಾಕುತ್ತಿದ್ದಾರೆ. ಸನ್ನಿವೇಶ ಆಧರಿಸಿ ಸಿ.ಟಿ.ರವಿ ಅಥವಾ ಎನ್. ರವಿಕುಮಾರ್ ಪರ ಅವರ ನಿಲುವು ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಳೆಗಾಲದ ಅಧಿವೇಶನದಲ್ಲಿಯೇ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕವಾಗುವ ಸಾಧ್ಯತೆ ದಟ್ಟವಾಗಿದ್ದು, ತೆರೆಮರೆಯಲ್ಲಿ ಪ್ರಯತ್ನ ಬಿರುಸಾಗಿ ಸಾಗಿದೆ.
Related Articles
Advertisement