Advertisement
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗುರುವಾರ ಭಾರೀ ಮಳೆಯಾಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಅತಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ, ಒಳನಾಡಿನ ಆಯ್ದ ಭಾಗಗಳಲ್ಲಿ ಕೂಡ ಇದರ ಪ್ರಭಾವ ಇರಲಿದೆ. ಉತ್ತರದ ಬೆಳಗಾವಿ ,ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು,ಶಿವಮೊಗ್ಗ, ಕೊಡಗಿನಲ್ಲಿ ಜುಲೈ 7 ಮತ್ತು 8ರಂದು ಭಾರೀ ಮಳೆಯ ನಿರೀಕ್ಷೆ ಇದೆ. ಒಡಿಶಾ, ಪಂಜಾಬ್, ಜಾರ್ಖಂಡ್ ಸುತ್ತಮುತ್ತ ಚಂಡಮಾರುತದ ಪರಿಚಲನೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆಯ ಸ್ಪಷ್ಟಪಡಿಸಿದೆ. Advertisement
ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
06:50 AM Jul 05, 2018 | |
Advertisement
Udayavani is now on Telegram. Click here to join our channel and stay updated with the latest news.