Advertisement

ಶಾಂತಿಯುತ ಪ್ರತಿಭಟನೆಗೆ ಅಭ್ಯಂತರವಿಲ್ಲ: ಬೊಮ್ಮಾಯಿ

11:19 PM Sep 10, 2019 | Team Udayavani |

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ ಬಂಧನ ವಿರೋಧಿಸಿ ಕಾಂಗ್ರೆಸ್‌ನವರು ಬುಧವಾರ ರಾಜ್ಯಾದ್ಯಂತ ನಡೆಸುತ್ತಿರುವ ಪ್ರತಿಭಟನೆಗೆ ಅಭ್ಯಂತರವಿಲ್ಲ. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ನಡೆಸುವ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ಕೈಗೊಳ್ಳಬೇಕಾದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪೊಲೀಸ್‌ ಇಲಾಖೆ ಕೈಗೊಂಡಿದೆ. ಶಿವಕುಮಾರ ಮೇಲಿನ ಪ್ರಕರಣದ ವಿಚಾರಣೆ ಹೊಸದೇನಲ್ಲ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಆದರೆ ಕಾಂಗ್ರೆಸ್‌ನವರು ಇದರಲ್ಲಿ ರಾಜಕಾರಣ ಮಾಡುತ್ತಿರುವುದು ರಾಜ್ಯದ ಜನರಿಗೆ ಗೊತ್ತಿದೆ. ಈ ಕುರಿತು ಹೆಚ್ಚಿನ ವಿಶ್ಲೇಷಣೆ ಅವಶ್ಯಕತೆಯಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next