Advertisement

ಯತ್ನಾಳ ಹೇಳಿದಂತೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಶಶಿಕಲಾ ಜೊಲ್ಲೆ

04:00 PM Nov 01, 2020 | keerthan |

ವಿಜಯಪುರ: ರಾಜ್ಯದಲ್ಲಿ ಶೀಘ್ರವೇ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪದೇ ಪದೆ ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಿ.ಎಂ. ಬದಲಾವಣೆ ಇಲ್ಲ, ಈ‌ ಕುರಿತು ಯತ್ನಾಳ ಅವರೊಂದಿಗೆ ಮಾತನಾಡುತ್ತೇನೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಭಾನುವಾರ ನಗರದಲ್ಲಿರು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅತಿವೃಷ್ಠಿ, ಪ್ರವಾಹ ನಷ್ಟದ ಪರಿಹಾರ ವಿತರಣೆಯಲ್ಲಿ ತಾರತಮ್ಯ ಆಗಿಲ್ಲ. ಯಾವುದೇ ಲೋಪವಾಗಿದ್ದಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದರು.

ಇದನ್ನೂ ಓದಿ:ಬಿಎಸ್ ವೈ ವಿರುದ್ಧ ಯಾರೇ ಮಾತನಾಡಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಲಕ್ಷ್ಮಣ ಸವದಿ

ವಿಜಯಪುರ ಕೊಲ್ಹಾರ ತಾಲೂಕಿನ ಮಲಘಾಣ, ಕೂಡಗಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಭೂಮಿ ಕಂಪಿಸುವ ಅನುಭವದಿಂದಾಗಿ ಅಲ್ಲಿನ ಜನರು ಆತಂಕದಲ್ಲಿದ್ದಾರೆ. ಈ ಕುರಿತು ನಿಖರ ಕಾರಣ ತಿಳಿಯಲು ಅಧ್ಯಯನಕ್ಕೆ ತಜ್ಞರ ತಂಡ ಕಳಿಸುವಂತೆ ವಿಪತ್ತು ನಿರ್ವಹಣಾ ಕೇಂದ್ರದ ಮುಖ್ಯಸ್ಥರಿಗೆ ಜಿಲ್ಲಾಡಳಿತ ಮನವಿ ಮಾಡಿದೆ. ನಾನೂ ಕೂಡಾ ಈ ಕುರಿತು ಸಂಬಂಧಿದವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next