Advertisement

Davanagere ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಕೃಷ್ಣ ಭೈರೇಗೌಡ

06:49 PM Nov 03, 2023 | Team Udayavani |

ದಾವಣಗೆರೆ: ಕಾಂಗ್ರೆಸ್‌ ಪಕ್ಷ, ಸರ್ಕಾರದಲ್ಲಾಗಲಿ ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದ್ದು ಯಾವುದೇ ಗೊಂದಲ ಇಲ್ಲ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷದ ನಾಯಕರಿಲ್ಲ. ಈ ವಿಷಯ ಮರೆಮಾಚಲು ಬಿಜೆಪಿಯವರು ದಿನಕ್ಕೊಂದು ಸುದ್ದಿ ಹರಡಿಸುತ್ತಿದ್ದಾರೆ. ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರ ಜೀವನಕ್ಕೆ ಸಹಕಾರಿ ಆಗಿವೆ.

ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಆರು ತಿಂಗಳಾದರೂ ಬಿಜೆಪಿಯ ಅಧ್ಯಕ್ಷರು ಯಾರು, ಪ್ರತಿಪಕ್ಷದ ನಾಯಕ ಯಾರು ಎಂಬುದು ಗೊತ್ತಿಲ್ಲ. ಅಂತಹವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪ್ರತಿಕ್ರಿಯಿಸಲ್ಲ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಬಂದು ಹೋಗಿದೆ. ಒಟ್ಟು 17 ಸಾವಿರ ಕೋಟಿಯಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ.

ನಾವು ನಿರಂತರವಾಗಿ ಕೇಂದ್ರದ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಕೃಷಿ ಮಂತ್ರಿಗಳನ್ನು ಭೇಟಿಯಾಗುತ್ತೇನೆ. ಕೇಂದ್ರಕ್ಕೆ ಈಗಾಗಲೇ ನಾಲ್ಕು ಬಾರಿ ಬರ ಪರಿಹಾರ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. ದೇಶದ ಎರಡನೇ ಅತಿ ದೊಡ್ಡ ತೆರಿಗೆ ಸಂಗ್ರಹಿಸುವ ಕರ್ನಾಟಕದವರು ಕೇಂದ್ರದಿಂದ ಬರ ಪರಿಹಾರದ ಹಣ ಬರುವ ಬಗ್ಗೆ ಆಶಾವಾದಿಗಳಾಗಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next