Advertisement

ಹಾಕಲೂ ಬುಟ್ಟಿ ಮಣ್ಣು ಗತಿ ಇರಲ್ಲ

06:30 AM Aug 02, 2018 | |

ಬೆಂಗಳೂರು: ಉ.ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ಸಂಬಂಧಿಸಿದಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ, “ಪ್ರತ್ಯೇಕ ರಾಜ್ಯವಾದರೆ ಒಂದು ಬುಟ್ಟಿ ಮಣ್ಣು ಹಾಕಲೂ ಗತಿ ಇರುವುದಿಲ್ಲ. 

Advertisement

ಅಲ್ಲಿನ ಜನ ಅಭಿವೃದ್ಧಿ ಇಲ್ಲದೆ ಸತ್ತೇ ಹೊಗುತ್ತಾರೆ. ಇದು ಗೊತ್ತಿಲ್ಲದೆ ಮೂರ್ಖರಂತೆ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ಪ್ರತ್ಯೇಕತೆಯ ಕೂಗು ಎಬ್ಬಿಸಿ, ಜನರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟಿ ಈಗ ಸಮಾಧಾನ ಮಾಡಲು ಹೊರಟಿದ್ದಾರೆ. ಅದರ ಬದಲು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಬಿಜೆಪಿ ಕಾರ್ಯನಿರ್ವಹಿಸಲಿ ಎಂದರು. ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ ಶ್ರೀರಾಮುಲು ವಿರುದ್ಧವೂ ನಾಡಗೌಡ ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next