Advertisement

ರಾಜಕಾರಣದಲ್ಲಿ ಡೆಡ್‌ಲೈನ್‌ ಇಲ್ಲ: ಸುಮಲತಾ

05:21 AM May 30, 2020 | Team Udayavani |

ಮದ್ದೂರು: ರಾಜಕಾರಣದಲ್ಲಿ ಯಾವುದೇ ಡೆಡ್‌ಲೈನ್‌ ಹಾಕಿಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ. ಇದು ನಿರಂತರ ಕಲಿಕಾ ಕ್ಷೇತ್ರವಾಗಿರುವುದರಿಂದ ನಾನೂ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದೇನೆ ಎಂದು ಸಂಸದೆ ಸುಮಲತಾ  ಸ್ಪಷ್ಟಪಡಿಸಿದರು.

Advertisement

ಪಟ್ಟಣದಲ್ಲಿ ಶುಕ್ರವಾರ ಅಂಬರೀಶ್‌ ಹುಟ್ಟುಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್‌ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತ ನಾಡಿ, ಸಂಸದೆಯಾದ ಒಂದೇ ವರ್ಷದಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವು ದಿಲ್ಲ. ಎಲ್ಲವನ್ನೂ ಸಂಪೂರ್ಣವಾಗಿ ತಿಳಿದು ಕ್ಷೇತ್ರದಲ್ಲಿ ಪ್ರವಾಸ ನಡೆಸಿ ಪರಿಹಾರ ಕಂಡುಕೊಳ್ಳಲಾ ಗುವುದು ಎಂದರು.

ಸಂಸದರ ನಿಧಿ ಬಳಕೆಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇದು ನಮ್ಮ ಕಾರ್ಯವೈಖರಿಯನ್ನು ಸಾಬೀತು ಪಡಿಸುತ್ತದೆ ಎಂದು ತಮ್ಮ ಅಧಿಕಾರದ ಸದ್ಬಳಕೆಯನ್ನು ಸಮರ್ಥಿಸಿಕೊಂಡರು. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡಿಲ್ಲ. ಮುಂಬೈನಿಂದ ಬಂದವರಲ್ಲಿ ಮಾತ್ರ  ಸೋಂಕು ಕಾಣಿಸಿಕೊಂಡಿದೆ. ಅದು ಜಿಲ್ಲಾದ್ಯಂತ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದ ಕಾರಣ ಹೆಚ್ಚಿನ ಅನಾಹುತಗಳು ಸಂಭವಿಸಿಲ್ಲ.

ಕೋವಿಡ್‌-19 ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಅಧಿಕಾರಿ ವರ್ಗ ಹೆಚ್ಚು  ಜವಾಬ್ದಾರಿಯಿಂದ ಕೆಲಸ ಮಾಡಿದೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next