Advertisement

Congress ಸತೀಶ ಜಾರಕಿಹೊಳಿ – ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ

02:54 PM Oct 23, 2023 | Team Udayavani |

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಕರ್ನಾಟಕ ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು.

Advertisement

ದಸರಾ ಹಬ್ಬದ ವಿಜಯದಶಮಿ ನಿಮಿತ್ಯ ಶ್ರೀ ಅನ್ನಪೂರ್ಣೇಶ್ವರಿ ಏತ ನೀರಾವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕಾಂಗ್ರೆಸ್ ಸರಕಾರ ಪತನವಾಗುತ್ತದೆ ಎಂಬುದು ವಿರೋಧ ಪಕ್ಷದವರು ಜನರಿಗೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಜೊತೆ 136 ಶಾಸಕರು ಜೊತೆಯಲ್ಲಿದ್ದುಕೊಂಡು ಐದು ವರ್ಷ ರಾಜ್ಯದ ಅಭಿವೃದ್ಧಿ ಪರ ಕೆಲಸ ಮಾಡಲಿದ್ದಾರೆ. ಸರಕಾರ ಪತನವಾಗುವ ವಿರೋಧಿಗಳ ಹೇಳಿಕೆ ಊಹಾಪೋಹ ಎಂದರು.

ನಾನೋಬ್ಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ನನ್ನ ಅನುಭವದ ಆಧಾರದ ಮೇಲೆ ಹೇಳುವುದಾದರೆ ಬೆಳಗಾವಿ ಜಿಲ್ಲೆಯ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next