Advertisement

ಕೆಎಸ್‌ಆರ್‌ಟಿಸಿ, ಮೆಟ್ರೋ ಸೇವೆಯಲ್ಲಿ ವ್ಯತ್ಯಾಸ ಇಲ್ಲಾ

11:10 AM Jan 25, 2018 | |

ಬೆಂಗಳೂರು: ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್‌ ಸಂಬಂಧಿಸಿದಂತೆ ಗುರುವಾರ ಮೆಟ್ರೊ ಸೇವೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ. ಯಥಾಪ್ರಕಾರ ಮೆಟ್ರೊ ರೈಲು ಸಂಚರಿಸಲಿದೆ. ಹೋರಾಟದ ತೀವ್ರತೆ ಹೆಚ್ಚಿದ್ದು, ಸಂಸ್ಥೆಯ ಉಪಕರಣಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಾದರೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ್‌ ಕುಮಾರ್‌ ತಿಳಿಸಿದರು.

Advertisement

ಕೆಎಸ್‌ಆರ್‌ಟಸಿ ಬಸ್‌ಗಳು ಕೂಡ ಎಂದಿನಂತೆ ಸಂಚಾರ ಮಾಡಲಿದೆ. ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗಿನ ಪರಿಸ್ಥಿತಿಯ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್‌ಗಳು ಯಥಾಪ್ರಕಾರ ಸಂಚಾರಿಸಲಿವೆ ಎಂದು ಕೆಎಸ್‌ ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next