Advertisement

ಮುಖ್ಯಮಂತ್ರಿ ಮತ್ತು ನನ್ನ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ : ಕಟೀಲ್

09:36 AM Sep 09, 2019 | Sriram |

ವಿಜಯಪುರ : ಮುಖ್ಯಮಂತ್ರಿ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ.

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ತಮ್ಮ ಮಧ್ಯೆ ಯಾವುದೇ ಭಿನ್ನಮತ ವ್ಯಕ್ತವಾಗಿಲ್ಲ. ಯಡಿಯೂರಪ್ಪ ನನಗೆ ಮಾರ್ಗದರ್ಶಕರು ಪಕ್ಷ ಸಂಘಟಿಸುವ ಕುರಿತು ಉತ್ತಮ ಚರ್ಚೆಯಾಗಿದೆ. ನಮ್ಮ ಕಡೆ ಕಾಫಿ ಪ್ಲ್ಯಾಂಟರ್ ಥರ ನ್ಯೂಸ್ ಪ್ಲ್ಯಾಂಟರ್ ಈ ಸುದ್ದಿಯನ್ನು ಸೃಷ್ಟಿಸಿದ್ದಾರೆ.

ವಿಜಯಪುರ ನಗರ ಬಿಜೆಪಿ ಶಾಸಕ ತಮ್ಮ ಕುರಿತು ಮಾಡಿರುವ ಟೀಕೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸುವುದಾಗಿ ಹೇಳಿದ ಅವರು, ಯತ್ನಾಳ ಹೇಳಿಕೆಯನ್ನು ಮಾರ್ಗದರ್ಶನ ಎಂದು ಪರಿಗಣಿಸುತ್ತೇನೆ ಅವರು ಹೇಳಿದಂತೆ ನಾನು ಮಂಗಳೂರು, ಉಡುಪಿಯಲ್ಲಿ ಸಕ್ರೀಯನಾಗಿದ್ದೆ.ಕೇರಳ ಬಿಜೆಪಿ ಉಸ್ತುವಾರಿ ಕಾರ್ಯ ನಿರ್ವಹಿಸಿದ್ದೇನೆ ಈಗ ಪಕ್ಷ ನನಗೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದೆ.ಇನ್ನು ಮುಂದೆ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟಿಸುತ್ತೇನೆ ಎಂದರು.

ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಕ್ಟೋಬರ್, ನವೆಂಬರ್‌ ವೇಳೆಗೆ ಪೂರ್ಣವಾಗಲಿದೆ ಎಂದು ವಿವರಿಸಿದರು.

ಐಎಎಸ್ ಅಧಿಕಾರಿ ಸಸಿಕಾಂತ ಸೇಂಥಿಲ್ ರಾಜೀನಾಮೆ ವಿಚಾರ
ಐಎಎಸ್ ಅಧಿಕಾರಿ ವೈಯಕ್ತಿಕ ಕಾರಣಕ್ಕಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಇದು ಸಂಬಂಧವಿಲ್ಲದ ವಿಷಯ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next