Advertisement

ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು- ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ

11:19 AM Jul 20, 2021 | Team Udayavani |

ಹೊಸದಿಲ್ಲಿ/ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರ. ನಾವೀಗ ಪ್ರತಿಪಕ್ಷದಲ್ಲಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತು ಯಾಕೆ ಬರುತ್ತದೆ ಎಂದರು.

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ನಾನೇ ಸಿಎಂ ಎಂದು ಯಾರು ಬೇಕಾದರೂ ಹೇಳಿಕೊಳ್ಳುವ ಸಂಸ್ಕ್ರತಿ ಬಿಜೆಪಿಯಲ್ಲಿಲ್ಲ: ರೇಣುಕಾಚಾರ್ಯ

ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ‌ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದರು.

Advertisement

ಇಂದು ಸಂಜೆ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next