Advertisement

ಯಾವ ಅಸಮಾಧಾನವೂ ಇಲ್ಲ,ಮಂತ್ರಿಗಿರಿ ಕೇಳುವುದು ತಪ್ಪಾ?:ಸಿದ್ದರಾಮಯ್ಯ

03:14 PM Sep 18, 2018 | Team Udayavani |

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ  ಯಾವುದೇ ಅಸಮಾಧಾನ ಇಲ್ಲ. ಎಲ್ಲವೂ ಸರಿಯಾಗಿ ಇದೆ. ಮಂತ್ರಿಗಿರಿ ಕೇಳಿದರೆ ಭಿನ್ನಮತ ಸ್ಫೋಟ ಅನ್ನುವುದು ಸರಿಯಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. 

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ  ಲಜ್ಜೆಗೆಟ್ಟ ಬಿಜೆಪಿ  ಮಾನಾಮರ್ಯಾದೆ ಬಿಟ್ಟು  ಅಧಿಕಾರ ದಾಹ ದಿಂದ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು. 

ಕಾಂಗ್ರೆಸ್‌ ಪಕ್ಷದ ಹಲವರನ್ನು ಬಿಜೆಪಿ ಸಂಪರ್ಕಿಸಿರುವುದು ಬಹಿರಂಗವಾಗಿದೆ. ಬಿಜೆಪಿ ಸರ್ಕಾರ ಬೀಳಿಸಲು ಯತ್ನಿಸಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು. 

ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ.ಸರ್ಕಾರ ಸುಭದ್ರವಾಗಿರಲಿದೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next