Advertisement

ಸಚಿವ ಸ್ಥಾನ ಬಗ್ಗೆ ಚರ್ಚೆ ಆಗಿಲ್ಲ: ಬೋಸರಾಜು

10:29 PM Jul 29, 2023 | Team Udayavani |

ರಾಯಚೂರು: ತಮಗೆ ನೀಡಿರುವ ಸಚಿವ ಸ್ಥಾನ ಕುರಿತಾಗಲಿ, ಇಲಾಖೆ ಕಾರ್ಯವೈಖರಿ ಬಗ್ಗೆಯಾಗಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಬೋಸರಾಜು ಸ್ಪಷ್ಪಪಡಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನ ಪರಿಷತ್‌ ಸಭಾ ನಾಯಕನಾಗಿದ್ದರಿಂದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಜತೆ ವೇದಿಕೆಯಲ್ಲಿದ್ದೆ. ಎಲ್ಲರ ಮಾತುಗಳನ್ನು ಆಲಿಸಿದ್ದೇನೆ. ಈ ವೇಳೆ ನನ್ನ ಸಚಿವ ಸ್ಥಾನ ಮತ್ತು ಇಲಾಖೆ ಬಗ್ಗೆ ಯಾವುದೇ ಶಾಸಕರು ಪ್ರಶ್ನೆ ಮಾಡಿಲ್ಲ. ಕೆಲವರು ವೃಥಾ ವದಂತಿ ಹಬ್ಬಿಸುತ್ತಿದ್ದಾರೆ ಎಂದರು.
ಪಕ್ಷಕ್ಕಾಗಿ ನನ್ನ ನಿಷ್ಠೆ, ನಾನು ಮಾಡಿರುವ ಸೇವೆಯನ್ನು ಗುರುತಿಸಿ ಹಿರಿಯರು ನನಗೆ ಸಚಿವ ಸ್ಥಾನ ನೀಡಿದ್ದಾರೆ. ಸಚಿವನಾದ ಬಳಿಕ ಪರಿಷತ್‌ ಸಭಾ ನಾಯಕನಾಗಿಯೂ ಉತ್ತಮ ಕೆಲಸ ಮಾಡುತ್ತಿದ್ದೇನೆ. ನನ್ನ ಇಲಾಖೆಯಲ್ಲಿ ಶಾಸಕರ ಕೆಲಸಗಳು ಮತ್ತು ಪತ್ರಗಳ ಫಾಲೋ ಅಪ್‌ಗಾಗಿ ಸಿಬಂದಿ ನೇಮಿಸಿದ್ದು, ಅವರೇ ಶಾಸಕರಿಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದರು.

ರಾಯಚೂರು ತಾಲೂಕನ್ನೇ ನನ್ನ ನೋಡಲ್‌ ತಾಲೂಕಾಗಿ ಆಯ್ಕೆ ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿ ಗಳ ಸಹಕಾರದೊಂದಿಗೆ ಅಭಿವೃದ್ಧಿಯ ಕನಸು ಮತ್ತು ಗುರಿ ಹೊಂದಿರುವು ದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next