Advertisement

ಹೆಚ್ಚುತ್ತಿದೆ ಕೋವಿಡ್ ಪ್ರಕರಣಗಳು: ನೈಟ್ ಕರ್ಫ್ಯೂ ಜಾರಿ ಬಗ್ಗೆ ಮಾಹಿತಿ ನೀಡಿದ ಬೊಮ್ಮಾಯಿ

02:30 PM Mar 14, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಇದುವರೆಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿವೆ ಎಂದರು.

ಇದನ್ನೂ ಓದಿ:ಬೆಳಗಾವಿ ಗಡಿ ವಿಚಾರದಲ್ಲಿ ಪ್ರಚೋದನಾತ್ಮಕ ಪೋಸ್ಟ್: ಎಫ್ ಬಿ, ವಾಟ್ಸಪ್ ಅಡ್ಮಿನ್ ಗಳ ಮೇಲೆ FIR

ಸಿಡಿ ಪ್ರಕರಣದ ಯುವತಿ ರಕ್ಷಣೆ ಕೋರಿದ್ದು ತಮ್ಮ ಗಮನಕ್ಕೆ ಬಂದಿದೆ. ಅದನ್ನು ಎಸ್ಐಟಿ ನೋಡಿಕೊಳ್ಳುತ್ತದೆ. ರಕ್ಷಣೆ ಕೋರಿದ ಕುಟುಂಬಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಸಿಎಂ ಬಿ ಎಸ್ ಯಡಿಯೂರಪ್ಪ ನಾಳೆ ಮುಂಜಾನೆ ಎಲ್ಲ ಸಚಿವರ ಸಭೆ ಕರೆದಿದ್ದಾರೆ. ಅಲ್ಲಿ ಯಾವ ವಿಷಯ ಚರ್ಚೆ ಆಗುತ್ತದೋ ನೋಡೋಣ ಎಂದು ಬೊಮ್ಮಾಯಿ ತಿಳಿಸಿದರು.

Advertisement

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

Advertisement

Udayavani is now on Telegram. Click here to join our channel and stay updated with the latest news.

Next