Advertisement

Congress ಸರಕಾರದಿಂದ ಗಣೇಶೋತ್ಸವಕ್ಕೆ ವಿಘ್ನವಿಲ್ಲ: ಪದ್ಮರಾಜ್‌

06:59 PM Sep 05, 2024 | Team Udayavani |

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಸರಕಾರ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ದೇಶದ ಯಾವುದೇ ಹಬ್ಬ ಆಚರಣೆಗೆ ಕಾಂಗ್ರೆಸ್‌ ಯಾವತ್ತೂ ತಡೆಯೊಡ್ಡಿಲ್ಲ. ಬದಲಾಗಿ ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಣೆಗೆ ಪ್ರೇರಣೆ ನೀಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.

Advertisement

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ವೇದವ್ಯಾಸ ಕಾಮತ್‌ ಆರೋಪಿಸಿರುವಂತೆ ಗಣೇಶ ಚತುರ್ಥಿ ಆಚರಣೆಗೆ ಜಿಲ್ಲಾಡಳಿತವಾಗಲಿ, ಸರಕಾರವಾಗಲಿ ಯಾವುದೇ ನಿರ್ಬಂಧ ವಿಧಿಸಿಲ್ಲ. ಶಾಸಕರು ಸಂಕುಚಿತ ಭಾವನೆಯಿಂದ ಹೊರಬರಬೇಕು.

ವಿಶೇಷ ಸಂಸ್ಕೃತಿಯನ್ನು ಹೊಂದಿರುವ ದ.ಕ. ಜಿಲ್ಲೆಯಲ್ಲಿ ಎಲ್ಲ ಧರ್ಮ, ಭಾಷೆಯವರು ಒಟ್ಟಾಗಿ ಶಿಸ್ತುಬದ್ಧವಾಗಿ ಹಬ್ಬವನ್ನು ಆಚರಿಸುತ್ತಾರೆ. ಇದನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮ ಆಯೋಜಕರು ಸಿದ್ಧತೆಗಳನ್ನು ನಡೆಸುತ್ತಾರೆ. ಆಯೋಜಕರು ಅನುಮತಿ ಪಡೆದುಕೊಳ್ಳಬೇಕೆಂಬ ನಿಯಮ ಹಿಂದಿನ ಸರಕಾರದ ಅವಧಿಯಲ್ಲೂ ಇತ್ತು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next