Advertisement

ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮ ಇಲ್ಲ

06:00 AM Oct 30, 2018 | Team Udayavani |

ಮಂಡ್ಯ: ಚುನಾವಣಾ ಪೂರ್ವದಲ್ಲಿ ಹೊಂದಾಣಿಕೆ ಮಾಡಿಕೊಂಡಂತೆ ಹಾಲಿ ನಡೆಯುತ್ತಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಗೆಲುವಿಗೆ ಮಾತ್ರ ಶ್ರಮಿಸಲಾಗುವುದು. ಕಾಂಗ್ರೆಸ್‌ ಅಭ್ಯರ್ಥಿಗಳ ಬೆಂಬಲಕ್ಕೆ
ಪಕ್ಷ ನಿಲ್ಲದೆ ತಟಸ್ಥ ಧೋರಣೆ ಅನುಸರಿಸುವುದಾಗಿ ಬಿಎಸ್‌ಪಿ ರಾಜ್ಯ ಉಸ್ತುವಾರಿ ಎನ್‌. ಮಹೇಶ್‌ ಹೇಳಿದರು. ಕಳೆದ ವಿಧಾನಸಭಾ ಚುನಾವಣಾ ವೇಳೆ ಜಾತ್ಯತೀತ ಜನತಾದಳದೊಂದಿಗೆ ಬಹುಜನ ಸಮಾಜ ಪಕ್ಷ ಮೈತ್ರಿ ಮಾಡಿಕೊಂಡಿತ್ತು. ಅದರ ಭಾಗವಾಗಿ ಈಗಲೂ ನಾವು ಕುಮಾರ ಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆ. ಮಂಡ್ಯ, ರಾಮ ನಗರ ಹಾಗೂ ಶಿವ ಮೊಗ್ಗ ಕ್ಷೇತ್ರಗಳಲ್ಲಿ
ಜೆಡಿಎಸ್‌ ಅಭ್ಯರ್ಥಿಗಳ ಪರವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ. ಬಳ್ಳಾರಿ ಮತ್ತು ಜಮ ಖಂಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದೊಂದಿಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವ ಕಾರಣ ಅಲ್ಲಿ ನಾವು ತಟಸ್ಥವಾಗಿರಲು ನಿರ್ಧರಿಸಿದ್ದೇವೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next