ಪಕ್ಷ ನಿಲ್ಲದೆ ತಟಸ್ಥ ಧೋರಣೆ ಅನುಸರಿಸುವುದಾಗಿ ಬಿಎಸ್ಪಿ ರಾಜ್ಯ ಉಸ್ತುವಾರಿ ಎನ್. ಮಹೇಶ್ ಹೇಳಿದರು. ಕಳೆದ ವಿಧಾನಸಭಾ ಚುನಾವಣಾ ವೇಳೆ ಜಾತ್ಯತೀತ ಜನತಾದಳದೊಂದಿಗೆ ಬಹುಜನ ಸಮಾಜ ಪಕ್ಷ ಮೈತ್ರಿ ಮಾಡಿಕೊಂಡಿತ್ತು. ಅದರ ಭಾಗವಾಗಿ ಈಗಲೂ ನಾವು ಕುಮಾರ ಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆ. ಮಂಡ್ಯ, ರಾಮ ನಗರ ಹಾಗೂ ಶಿವ ಮೊಗ್ಗ ಕ್ಷೇತ್ರಗಳಲ್ಲಿ
ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ. ಬಳ್ಳಾರಿ ಮತ್ತು ಜಮ ಖಂಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಅಲ್ಲಿ ನಾವು ತಟಸ್ಥವಾಗಿರಲು ನಿರ್ಧರಿಸಿದ್ದೇವೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
Advertisement