Advertisement

ನೆರವು ಕೋರಿದ ಬಗ್ಗೆ ಮಾಹಿತಿ ಇಲ್ಲ

01:15 AM Jan 12, 2019 | Team Udayavani |

ಬೆಂಗಳೂರು: “ಮಲ್ಪೆ ಬಂದರಿನಿಂದ ಬೋಟ್‌ ಸಹಿತ ನಾಪತ್ತೆಯಾಗಿರುವ ಏಳು ಮೀನುಗಾರರ ನಾಪತ್ತೆಗೆ ಸಂಬಂಧಿಸಿದಂತೆ ನೆರವಿಗಾಗಿ ಸರ್ಕಾರ ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ. ಸಿವನ್‌ ತಿಳಿಸಿದ್ದಾರೆ.

Advertisement

ನಗರದ ಇಸ್ರೋ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರವು ಕೋರಿ ರಾಜ್ಯ ಸರ್ಕಾರ ತಮಗೆ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಬಹುಶಃ ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್‌ಆರ್‌ಎಸ್‌ಸಿ)ದ ಮೊರೆ ಹೋಗಿರಲೂಬಹುದು. ಈ ಕುರಿತು ಪರಿಶೀಲಿಸಲಾಗುವುದು’ ಎಂದು ಹೇಳಿದರು.

ಸರ್ಕಾರ ಬಯಸಿದರೆ, ನೆರವು ನೀಡಲು ಸಿದ್ಧ. ಅಷ್ಟಕ್ಕೂ ಇಸ್ರೋ ನ್ಯಾವಿಗೇಷನ್‌ ಹಾಗೂ ಅಲರ್ಟ್‌ ಎಂಬ ಎರಡು ಅಪ್ಲಿಕೇಷನ್‌ಗಳನ್ನು ಹೊಂದಿದೆ. ಈ ವ್ಯವಸ್ಥೆಗಳನ್ನು ಮೀನುಗಾರರು ಅಳವಡಿಸಿಕೊಂಡಿದ್ದರೆ, ಅದರ ಮೂಲಕ ಪತ್ತೆ ಮಾಡಲು ಸಾಧ್ಯವಿದೆ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next