Advertisement

ಸಂಪುಟ ವಿಸ್ತರಣೆಯಲ್ಲಿ ದೇವೇಗೌಡರ ಹಸ್ತಕ್ಷೇಪವಿಲ್ಲ

06:10 AM Jun 03, 2018 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆಯಲ್ಲಿ ದೇವೇಗೌಡರ ಹಸ್ತಕ್ಷೇಪವಿಲ್ಲ. ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬ ವರದಿಗಳಲ್ಲಿ ಸತ್ಯಾಂಶವಿಲ್ಲ. ಆ ಖಾತೆ ಒತ್ತಡ ಹಾಕಿ ಪಡೆದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂಧನ ಖಾತೆ ವಿಚಾರದಲ್ಲಿ ದೇವೇಗೌಡರು ಮಾಸ್ಟರ್‌ ಪ್ಲಾನ್‌ ಮಾಡಿದರು, ಡಿ.ಕೆ.ಶಿವಕುಮಾರ್‌-ಎಚ್‌. ಡಿ.ರೇವಣ್ಣ ಜಟಾಪಟಿ ಮಾಡಿದರು ಎಂಬುದೆಲ್ಲ ನಿರಾಧಾರ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರದಲ್ಲಿ ಕೊಟ್ಟು ತೆಗೆದುಕೊಳ್ಳುವ ನೀತಿ ಅನ್ವಯ ಆಗುತ್ತದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ
ವೇಣುಗೋಪಾಲ್‌ ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯುವ ಬಗ್ಗೆ ದೇವೇಗೌಡರ ಜತೆ ಚರ್ಚಿಸಿದ್ದಾರೆ ಎಂದರು.

ಜೆಡಿಎಸ್‌ ಹಣಕಾಸು ಇಲಾಖೆ ಕೇಳಿದ್ದು ನಿಜ. ಆದರೆ ಬೇರೆ ವಿಚಾರದಲ್ಲಿ ಯಾವುದೇ ಜಟಾಪಟಿ ನಡೆದಿಲ್ಲ. ನಾನೂ ಡಿ.ಕೆ.ಶಿವಕುಮಾರ್‌ ಜತೆ ಮಾತನಾಡಿದ್ದೇನೆ. ಯಾವ ಖಾತೆ ಬೇಕು ಎನ್ನುವುದು ಅವರಿಗೆ ಬಿಟ್ಟಿದ್ದು. ಎರಡೂ 
ಪಕ್ಷಗಳಿಗೆ ಎಷ್ಟೆಷ್ಟು ಮತ್ತು ಯಾವ್ಯಾವ ಖಾತೆ ಎಂಬುದು ಹಂಚಿಕೆಯಾಗಿದೆ. ಆದರೆ,ಸಚಿವರ ಪಟ್ಟಿ ಇನ್ನೂ ಸಿದ್ಧವಾಗಿಲ್ಲ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ನಂತರ ಹೊಸ ಬಜೆಟ್‌ ಮಂಡಿಸಲು ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಜತೆಗೆ ಜಂಟಿ
ಅಧಿವೇಶನದ ಬಗ್ಗೆಯೂ ತೀರ್ಮಾನಿಸಲಾಗುವುದು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next