Advertisement

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡುವುದಿಲ್ಲ: ಬಿ.ಸಿ.ಪಾಟೀಲ್

11:31 AM Mar 22, 2021 | Team Udayavani |

ಬೆಂಗಳೂರು: ಯಾವುದೇ ಕಾರಣಕ್ಕೆ ಲಾಕ್ ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಪ್ರಸಕ್ತ ಆರ್ಥಿಕ ಪರಿಸ್ಥಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ. ಕಳೆದ ವರ್ಷಕ್ಕೂ ಈ ವರ್ಷಕ್ಕೂ ಪರಿಸ್ಥಿತಿ ಬೇರೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಗೆ ಹೋಗುವುದು ನನ್ನ ಹಕ್ಕು. ಅದನ್ನು ಪ್ರಶ್ನಿಸುವುದಕ್ಕೆ ಕಾಂಗ್ರೆಸ್ ನವರಿಗೆ ಏನು ಹಕ್ಕಿದೆ. ಕಾಂಗ್ರೆಸ್ ನಾಯಕರು ನೀತಿ ಸಿದ್ದಾಂತದ ಮೇಲೆ ಹೊರಾಟ ಮಾಡಬೇಕು. ಆದರೆ ಹೋರಾಟಕ್ಕೆ ಅವರಿಗೆ ಏನೂ ವಿಷಯ ಸಿಗುತ್ತಿಲ್ಲ. ಅವರ ಸರ್ಕಾರವನ್ನು ತೆಗೆದ ಕಾರಣಕ್ಕೆ ನಮ್ಮ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದರು.

ರೈತ ಹೋರಾಟದ ಬಗ್ಗೆ ಮಾತನಾಡಿದ ಅವರು, ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ. ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು. ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next