Advertisement

ಬಿಎಸ್‌ವೈ ನಾಯಕತ್ವಕ್ಕೆ ಯಾವುದೇ ಆಕ್ಷೇಪವಿಲ್ಲ : ಪ್ರಹ್ಲಾದ ಜೋಶಿ

10:07 AM Jan 29, 2020 | sudhir |

ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ನಾಯಕತ್ವದ ಬಗ್ಗೆ ಕೇಂದ್ರದ ನಾಯಕರಿಗಾಗಲಿ, ರಾಜ್ಯದ ನಾಯಕರಿಗಾಗಲಿ ಯಾವುದೇ ಆಕ್ಷೇಪ ಇಲ್ಲ. ಅವರ ನಾಯಕತ್ವದ ಬಗ್ಗೆ ಅಪಾರ ಗೌರವ ಇದೆ. ಅವರ ನಾಯಕತ್ವಕ್ಕೆ ಆಕ್ಷೇಪ ಎನ್ನುವುದು ಕೇವಲ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಬಗ್ಗೆ ಪಕ್ಷದ ಹೈಕಮಾಂಡ್‌ ಅಪಾರ ಗೌರವ ಹೊಂದಿದೆ. ಅವರನ್ನು ಕಡೆಗಣಿಸುವ ಮಾತೇ ಇಲ್ಲ. ಸಚಿವ ಸಂಪುಟ ವಿಸ್ತರಣೆ, ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ಪಕ್ಷ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದವರಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಎಂಬ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷ ತೀರ್ಮಾನಿಸುತ್ತದೆ ಎಂದರು.

ಸಿಎಎ, ಎನ್‌ಆರ್‌ಸಿ ವಿರುದ್ಧ ಹೋರಾಟಕ್ಕೆ ಹಾಗೂ ಹಿಂಸಾಚಾರಕ್ಕೆ ವಿದೇಶಗಳಿಂದ ಹಣ ಹರಿದು ಬಂದಿರುವುದು ಆತಂಕಕಾರಿ ವಿಚಾರ. ವಿದೇಶಿ ಹಣ ಬಳಸಿಕೊಂಡು ಕೆಲವರು ಹೋರಾಟಕ್ಕೆ ಮುಂದಾಗಿರುವುದು ಕಳವಳಕಾರಿ ಸಂಗತಿ. ಸಿಎಎ ಬಗ್ಗೆ ಸಂಸತ್‌ನಲ್ಲಿ ಸುದೀರ್ಘ‌ ಚರ್ಚೆಯಾಗಿದೆ. ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಿ, ಸಂಸತ್ತಿನಲ್ಲಿ ಒಪ್ಪಿಗೆ ಪಡೆದ ನಂತರವೇ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಅದರ ವಿರುದ್ಧ ಕೆಲವರು ವಿನಾಕಾರಣ ಹೋರಾಟಕ್ಕಿಳಿಸಿದ್ದು, ಇದರ ಹಿಂದೆ ಕಾಂಗ್ರೆಸ್‌ ಸೇರಿ ವಿಪಕ್ಷಗಳ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next