Advertisement

ಪರಿಹಾರ ಕಾರ್ಯದಲ್ಲೂ ರಾಜಕೀಯ ಸರಿಯಲ್ಲ

11:57 PM Aug 12, 2019 | Team Udayavani |

ಬೆಂಗಳೂರು: ಒನ್‌ ಮ್ಯಾನ್‌ ಶೋ ಅಥವಾ ಟೂ ಮ್ಯಾನ್‌ ಶೋ ಮುಖ್ಯವಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಾವೇ ಮುಂದುನಿಂತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಿದ್ದಾರೆ. ಇಂತಹ ವಿಷಯದಲ್ಲಿ ರಾಜಕೀಯ ಸರಿಯಲ್ಲ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯ ಮುಂಭಾಗ ಸೋಮವಾರ ಬೆಳಗ್ಗೆ ಚಿಕ್ಕೋಡಿ ಪ್ರವಾಹ ಪೀಡಿತ ಪ್ರದೇಶಕ್ಕೆ 10 ಟನ್‌ ಅಕ್ಕಿ ಮತ್ತು ಕುಡಿಯುವ ನೀರು ಸಹಿತವಾಗಿ ವಿವಿಧ ಸಾಮಗ್ರಿಗಳನ್ನು ಟ್ರಕ್‌ ಮೂಲಕ ಕಳುಹಿಸಿಕೊಟ್ಟ ನಂತರ ಮಾತನಾಡಿದ ಅವರು, ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಭೀಕರ ಪ್ರವಾಹ ಹಾಗೂ ಮಳೆಹಾನಿಯಾಗಿದೆ. ಈ ಹಂತದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸೇರಿ ಯಾರೂ ರಾಜಕೀಯ ಮಾಡುವ ಅಗತ್ಯವಿಲ್ಲ.

ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಬೇಕು. ನೆರೆ ಸಂತ್ರಸ್ತರಿಗೆ ನೆರವು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿ ಯುವಮೋರ್ಚಾದ ವತಿಯಿಂದ ಮಲ್ಲೇಶ್ವರದ ಮಾರುಕಟ್ಟೆ ಪ್ರದೇಶಕ್ಕೆ ತೆರಳಿ ಅಂಗಡಿಗಳಲ್ಲಿ ನೆರೆ ಸಂತ್ರಸ್ತರಿಗಾಗಿ ವಿವಿಧ ವಸ್ತು ಮತ್ತು ನಿಧಿ ಸಂಗ್ರಹ ಮಾಡಲಾಯಿತು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಯುವಮೋಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ ಗೌಡ, ಬೆಂಗಳೂರು ಮಹಾನಗರ ಯುವಮೋರ್ಚಾ ಅಧ್ಯಕ್ಷ ಸಪ್ತಗಿರಿಗೌಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next