Advertisement

ಕೋವಿಡ್‌ ವಿಚಾರದಲ್ಲಿ ರಾಜಕೀಯ ಬೇಡ

05:21 AM May 24, 2020 | Team Udayavani |

ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್‌ 19 ನಿಯಂತ್ರಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕು ತಡೆಗಟ್ಟುವ ವಿಚಾರದಲ್ಲಿ ರಾಜಕೀಯ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

Advertisement

ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿ, ನಮ್ಮ ಮೇಲೆ ಆರೋಪ ಮಾಡಿದವರ ಕ್ಷೇತ್ರಕ್ಕೇ ಮುಂಬೈನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಇದಕ್ಕೆ ಅವರೇನು ಹೇಳುತ್ತಾರೆ ಎಂದು  ಪ್ರಶ್ನಿಸಿದ ಸಚಿವರು,  ಇಂಥ ಸಂದರ್ಭದಲ್ಲಿ ರಾಜಕೀಯ ಮಾಡಬಾರದು. ಬಂದವರಿಗೆ ಕ್ವಾರಂಟೈನ್‌ ಸೌಲಭ್ಯ ನೀಡುವುದು ನಮ್ಮ ಕರ್ತವ್ಯ. ಆ ಕೆಲಸ ಮಾಡುತ್ತಿದ್ದೇವೆ ಎಂದು ಶಾಸ ಕ ಸುರೇಶ್‌ಗೌಡ ಆರೋ ಪಕ್ಕೆ ಪ್ರತಿಕ್ರಿಯಿಸಿದರು.

ಅಗತ್ಯ ಸೌಲಭ್ಯ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊ ಳ್ಳುವ ಕ್ರಮಗಳಿಗೆ ಹಣದ ಕೊರತೆ ಇಲ್ಲ. ಎಲ್ಲ ತಾಲೂಕಿಗೆ ಅಗತ್ಯಕ್ಕೆ ತಕ್ಕಂತೆ ಹಣ ನೀಡುತ್ತಿದ್ದೇವೆ. ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಕೆಲವರು ಕಣ್ತಪ್ಪಿಸಿ ಹೊರ  ರಾಜ್ಯದಿಂದ ಜಿಲ್ಲೆಗೆ ಬಂದ ಕಾರಣ ಸ್ವಲ್ಪ ಕಷ್ಟ ಆಗಿತ್ತು. ಈಗ ಎಲ್ಲವು ನಿಯಂತ್ರಣಕ್ಕೆ ಬಂದಿದೆ ಎಂದರು.

ಮುಂಜಾಗ್ರತೆ ಕೈಗೊಳ್ಳಿ: ಜನಜೀವನ ಕಷ್ಟ ಆಗುತ್ತೆ ಎಂಬ ಕಾರಣಕ್ಕೆ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಅನಿವಾರ್ಯವಾಗಿತ್ತು. ಆದರೂ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜಾಗ್ರತೆಯಿಂದ ಇರಬೇಕು. ಜಿಲ್ಲೆಯ ಬಗ್ಗೆ  ಮುಖ್ಯಮಂತ್ರಿಗಳು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಯಾವುದೇ ವಿಚಾರ ಇದ್ದರೂ ತಕ್ಷಣ ಸ್ಪಂದಿಸುತ್ತಿದ್ದಾರೆ.

ಸಂಸದೆ ಸುಮಲತಾ ಅವರೂ ಜಿಲ್ಲೆಯಲ್ಲಿ ಓಡಾಡಿ ಮಾಡಿ ಪರಿಶೀಲಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲವರು  ಮಾತಾಡಿದರೆ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್‌,  ಜಿಲ್ಲಾಧಿಕಾರಿ ಡಾ.ವೆಂಕಟೇ ಶ್‌, ಎಸ್ಪಿ ಪರಶುರಾಮ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next