Advertisement

ರಾಜ್ಯದಲ್ಲಿ ಆರ್ ಎಸ್ಎಸ್ ಒತ್ತಡ ಇಲ್ಲ, ಕೇಂದ್ರದಲ್ಲಿ ಗೊತ್ತಿಲ್ಲ: ಸಚಿವ ಸೋಮಶೇಖರ್

12:13 PM Oct 06, 2021 | Team Udayavani |

ಮೈಸೂರು : ರಾಜ್ಯ ಸರಕಾರದ ಅಡಳಿತದ ಮೇಲೆ ಆರ್ ಎಸ್ಎಸ್ ಯಾವುದೇ ಒತ್ತಡ ಹೇರುತ್ತಿಲ್ಲ ಎಂದು  ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

Advertisement

ಅರ್ ಎಸ್ ಎಸ್ ಕುರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್, ಕುಮಾರಸ್ವಾಮಿ ರವರಿಗೆ ಮಾಹಿತಿ ಕೊರತೆ ಇದೆ.ಇದು ಚುನಾವಣಾ ದೃಷ್ಟಿಯಿಂದ ಹೇಳುತ್ತಿರಬಹುದು.  ರಾಜ್ಯ ಸರಕಾರದಲ್ಲಿ ಯಾವುದೇ ಒತ್ತಡವೂ ಇಲ್ಲ,ಕೇಂದ್ರ ಸರಕಾರದ್ದು ನನಗೆ ಗೊತ್ತಿಲ್ಲ ಎಂದು ಸಚಿವ ಸೋಮಶೇಖರ್ ಹೇಳಿದರು.

ದಸರಾ: ಎಲ್ಲಾ ರೀತಿಯ ಸಿದ್ದತೆ ನಡೆದಿದೆ‌.

ವಿಶ್ವ ವಿಖ್ಯಾತ ಮೈಸೂರು ದಸರಾ ಸಿದ್ದತೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈಗಾಗಲೇ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನಾ ಸಮಾರಾಂಭದ ಸಂಪೂರ್ಣ ಸಿದ್ದತೆ ಮುಗಿದಿದೆ. ಮಳೆ ವಾತಾವರಣ ಇರುವ ಹಿನ್ನೆಲೆ ವಾಟರ್ ಪ್ರೂಫ್ ಪೆಂಡಾಲ್ ಹಾಕಲಾಗಿದೆ.ಅರಮನೆ ಆವರಣದಲ್ಲೂ ನಾಳೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಎಲ್ಲಾ ರೀತಿಯ ಸಿದ್ದತೆ ನಡೆದಿದ್ದು, ಈ ಬಾರಿ ಜಂಬೂಸವಾರಿ ವೀಕ್ಷಣೆ ಗೆ ಸಾರ್ವಜನಿಕರಿಗೆ ಅವಕಾಶ ಇಲ್ಲ.ಕೇವಲ ಜನಪ್ರತಿನಿಧಿಗಳಿಗೆ, ಪೊಲೀಸರು, ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಅರಮನೆ ಪ್ರವೇಶಕ್ಕೆ ಅವಕಾಶ ಇದ್ದು , ಸಾರ್ವಜನಿಕರು ಅನ್ ಲೈನ್ ನಲ್ಲಿ ದಸರಾ ವೀಕ್ಷಣೆ ಮಾಡಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next