Advertisement

ದೇವರ ಅನುಗ್ರಹವಿದ್ದರೆ ಸಂಕಷ್ಟವಿಲ್ಲ: ಡಾ|ಬಲ್ಲಾಳ್‌

12:00 AM Mar 30, 2019 | Team Udayavani |

ಮಲ್ಪೆ: ಆಧ್ಯಾತ್ಮಿಕ ಚಿಂತನೆಗಳ ಮೂಲಕ ಮಾನಸಿಕ ಶಕ್ತಿ ತುಂಬಿದವರು ಕೋಟಿ ಚೆನ್ನಯ್ಯರು. ಅವರಂತೆ ನಾವು ದೈಹಿಕ, ಮಾನಸಿಕವಾಗಿ ಗಟ್ಟಿಯಾದಾಗ, ದೇವರ ಅನುಗ್ರಹ ಇದ್ದಾಗ ಯಾವ ತೊಂದರೆಯೂ ಬರಲು ಸಾಧ್ಯವಿಲ್ಲ ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.

Advertisement

ಕಪ್ಪೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಶ್ರೀ ಬ್ರಹ್ಮ ಬೈದರ್ಕಳ ಶ್ರೀ ವ್ಯಾಘ್ರ ಚಾಮುಂಡೀ ಮತ್ತು ಮಯಿಂದಾಲ ಪರಿವಾರ ಶಕ್ತಿಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಕುತ್ಯಾರು ಪ್ರಸಾದ್‌ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಗರೋಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಸಮಿತಿಯ ಗೌರವಾಧ್ಯಕ್ಷ ಪುರುಷೋತ್ತಮ ಶೆಟ್ಟಿ, ಗೌರವ ಸಲಹೆಗಾರ ಸೀತಾರಾಮ ಶೆಟ್ಟಿ, ಆಡಳಿತ ಸಮಿತಿ ಗೌರವಾಧ್ಯಕ್ಷ ಗುಂಡು ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಉದ್ಯಮಿ ಹರಿಯಪ್ಪ ಕೋಟ್ಯಾನ್‌, ನಗರಸಭಾ ಸದಸ್ಯ ಹರೀಶ್‌ ಶೆಟ್ಟಿ, ನ್ಯಾಯವಾದಿ ಜಯಪ್ರಕಾಶ್‌ ಕೆದ್ಲಾಯ, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷ ಪ್ರಮೋದ್‌ ಸಾಲ್ಯಾನ್‌, ಗ್ರಾ. ಪಂ. ಸದಸ್ಯರಾದ ವಿಜಯ ಶೆಟ್ಟಿ ಕಪ್ಪೆಟ್ಟು, ರೋಹಿಣಿ ಎಸ್‌. ಪೂಜಾರಿ ಉಪಸ್ಥಿತರಿದ್ದರು.

ಸಮ್ಮಾನ
ಗರೋಡಿಗಾಗಿ ಅವಿರತ ಸೇವೆ ಮಾಡಿರುವ ಶಂಕರಣ ಪಂಬದ, ಸಂಜೀವ ಪೂಜಾರಿ ಮತ್ತು ಮುದ್ದು ಪೂಜಾರಿ ಅವರನ್ನು ಸಮ್ಮಾನಿಸ ಲಾಯಿತು.

Advertisement

ಆಡಳಿತ ಸಮಿತಿಯ ಅಧ್ಯಕ್ಷ ಸೂರ್ಯಪ್ರಕಾಶ್‌ ಕೆ. ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ವಂದಿಸಿ ದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next