Advertisement

ಸರ್ಕಾರಕ್ಕೆ ತೊಂದರೆಯಿಲ್ಲ: ಎಂಟಿಬಿ 

06:30 AM Oct 02, 2018 | Team Udayavani |

ಬೆಂಗಳೂರು: ಇನ್ಮುಂದೆ ಸಮ್ಮಿಶ್ರ ಸರ್ಕಾರಕ್ಕೆ ನನ್ನಿಂದ ಯಾವುದೇ ತೊಂದರೆ ಆಗುವುದಿಲ್ಲ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ನನ್ನೆಲ್ಲ ಸಮಸ್ಯೆಗಳು ಬಗೆಹರಿದಿವೆ ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್‌ ಹೇಳಿದ್ದಾರೆ. 

Advertisement

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ 100 ಪರ್ಸೆಂಟ್‌ ಸುಭದ್ರವಾಗಿರುತ್ತದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಹೈಕಮಾಂಡ್‌ ಜೊತೆ ಚರ್ಚಿಸುವ ಭರವಸೆ ನೀಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next