Advertisement

ಪಿಯುಸಿ ಪರೀಕ್ಷೆ ಕೃಪಾಂಕ ಇಲ್ಲ 

12:30 AM Mar 19, 2019 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ಜೀವಶಾಸ್ತ್ರ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮಕ್ಕೆ ಹೊರತಾದ ಯಾವುದೇ ಪ್ರಶ್ನೆ
ನೀಡದಿರುವುದರಿಂದ ಕೃಪಾಂಕ ನೀಡು ವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Advertisement

ಮಾ.14ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಪಠ್ಯೇತರ ಮತ್ತು ಪ್ಯಾಟರ್ನ್ ಬದಲಾಯಿಸಿ ಪ್ರಶ್ನೆಗಳನ್ನು ಕೇಳಲಾಗಿದೆ. ವಿದ್ಯಾರ್ಥಿಗಳು ಉತ್ತರಿಸಲು ಕಷ್ಟವಾಗಿದೆ. ಹೀಗಾಗಿ, ಕೃಪಾಂಕ ನೀಡಬೇಕೆಂದು ಪಾಲಕರು ಮತ್ತು ವಿದ್ಯಾರ್ಥಿಗಳು ಇಲಾಖೆಯನ್ನು ಒತ್ತಾಯಿಸಿದ್ದರು. ಇದರ ಪರಿಶೀಲನೆಗಾಗಿ ಒಂದು ಸಮಿತಿ ರಚನೆ ಮಾಡಿದ್ದೆವು. ಸಮಿತಿ ಎಲ್ಲವನ್ನು ಕೂಲಂಕಶವಾಗಿ ಪರಿಶೀಲಿಸಿ ವರದಿ ನೀಡಿದೆ. ಎನ್‌ಸಿಇಆರ್‌ಟಿ ಪಠ್ಯಕ್ರಮದ ಪ್ರಶ್ನೆಗಳನ್ನೇ ಕೇಳಲಾಗಿದ್ದು, ಕೃಪಾಂಕ ನೀಡುವುದಿಲ್ಲ ಎಂದು ಪಿಯು ಇಲಾಖೆ
ನಿರ್ದೇಶಕ ಜಾಫ‌ರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next