Advertisement

ಸಿಎಂ ಬದಲಾವಣೆ ಪ್ರಶ್ನೆ ಇಲ್ಲ: ಸಚಿವ ಸತೀಶ

12:30 AM Jan 29, 2019 | Team Udayavani |

ಬೆಳಗಾವಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ. ಅವರಿಗೆ ಸಮ್ಮಿಶ್ರ ಸರಕಾರ ನಡೆಸಿದ ಅನುಭವ ಇದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲ ಒತ್ತಡಗಳಿಂದ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತೇನೆಂದು ಹೇಳಿರಬಹುದು. ನೋವು ಆದಾಗ ಈ ರೀತಿಯ ಹೇಳಿಕೆಗಳು ಬರುತ್ತವೆ. ಆದರೆ ಅವರಿಗೆ ಸರಕಾರ ನಡೆಸುವ ಸಾಮರ್ಥ್ಯವಿದೆ ಎಂದರು. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಅವರೇ ಇರುತ್ತಾರೆ. ಸರಕಾರ ರಚನೆ ವೇಳೆಯೇ ಇದು ತೀರ್ಮಾನ ಆಗಿದೆ. ಹೀಗಾಗಿ ಯಾರೋ ಒಂದಿಬ್ಬರು ಶಾಸಕರ ಹೇಳಿಕೆಗೆ ಬದಲಾವಣೆ ಮಾಡಲು ಆಗುವುದಿಲ್ಲ ಎಂದರು.

Advertisement

ಸಚಿವ ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಹಾಗೂ ಎಂಟಿಬಿ ನಾಗರಾಜ ಸೇರಿ ಕೆಲ ಶಾಸಕರು ಈಗಲೂ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next