Advertisement

BJP: ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ : ಜಗದೀಶ್‌ ಶೆಟ್ಟರ್‌

12:07 AM Dec 29, 2023 | Team Udayavani |

ಮಡಿಕೇರಿ: ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಕಾಂಗ್ರೆಸ್‌ನ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ.

Advertisement

ಕುಶಾಲನಗರದ ಬಳಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ನನ್ನನ್ನು ಯಾರೂ ಕರೆದಿಲ್ಲ ಎಂದರು. ಬಿಎಸ್‌ವೈ ಸರಕಾರದ ವಿರುದ್ಧ ಯತ್ನಾಳ್‌ 40 ಸಾವಿರ ಕೋಟಿ ರೂ. ಅಕ್ರಮ ಆರೋಪ ವಿಚಾರ ಬಗ್ಗೆ ಉತ್ತರಿಸಿದ ಶೆಟ್ಟರ್‌ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಈಗ ಎಲ್ಲವೂ ಹೊರಗೆ ಬರುತ್ತಿದೆ. ಈಗಾಗಲೇ ಸಿದ್ದರಾಮಯ್ಯರ ಸರಕಾರ ತನಿಖೆ ಸಮಿತಿ ರಚಿಸಿದೆ. ತನಿಖೆ ನಡೆಯುತ್ತಿದೆ. ಯತ್ನಾಳ್‌ ಮಾಹಿತಿ ತೆಗೆದುಕೊಂಡು ತನಿಖೆ ಮಾಡಿದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದ ಶೆಟ್ಟರ್‌ ಯತ್ನಾಳ್‌ ಆರೋಪದ ಬಗ್ಗೆ ದಾಖಲೆ ಕೊಟ್ಟರೆ ತನಿಖೆಗೆ ಅನುಕೂಲ ಆಗಲಿದೆ ಎಂದರು.

ವೀರಶೈವ ಲಿಂಗಾಯತ ಮಹಾ ಅಧಿವೇಶನದಲ್ಲಿ ಧರ್ಮ ನಿರ್ಣಯ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್‌, ಲಿಂಗಾಯತ ವೀರಶೈವ ಸಮುದಾಯ ಸಂಖ್ಯೆ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದರು. ಮಡಿಕೇರಿ ಶಾಸಕರಾದ ಡಾ| ಮಂತರ್‌ ಗೌಡ ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next