Advertisement

ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ

06:10 AM Nov 15, 2018 | Team Udayavani |

ಹಗರಿಬೊಮ್ಮನಹಳ್ಳಿ: “ನಾನು ಬಿಜೆಪಿ ಸೇರುತ್ತೇನೆ ಎಂಬುದೆಲ್ಲ ಸುಳ್ಳು. ದೇಶದಲ್ಲಿ ಬಿಜೆಪಿಯ ವರ್ಚಸ್ಸು ಕಡಿಮೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ’ ಎಂದು ವಿಜಯನಗರ ಶಾಸಕ ಆನಂದ್‌ ಸಿಂಗ್‌ ತಿಳಿಸಿದರು. 
 
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಒಮ್ಮೆ ಆ ಪಕ್ಷದಿಂದ ಆಚೆ ಬಂದಿರುವ ನಾನು ಯಾವುದೇ ಕಾರಣಕ್ಕೂ ಮತ್ತೆ ಅದೇ ಪಕ್ಷ ಸೇರುವ ಪ್ರಶ್ನೆ ಉದ್ಭವಿಸಲಾರದು. ನಾನು ಸಚಿವ ಸ್ಥಾನದ ಸ್ಪರ್ಧೆಯಲ್ಲಿಲ್ಲ. ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಹೆಚ್ಚಿನ ಮತ ಬಂದಿದ್ದವು, ಆ ಕ್ಷೇತ್ರಕ್ಕೆ ಸಚಿವ ಸ್ಥಾನ ಎಂದು ಹೇಳಲಾಗಿದೆ. ಆದರೆ, ವಿಜಯನಗರ ಕ್ಷೇತ್ರದಲ್ಲಿ ಹೆಚ್ಚಿನ ಮತಗಳಿಸಲಾಗಿಲ್ಲ. ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ನೋಡಬೇಕಿದೆ’ ಎಂದರು.

Advertisement

ವಿಜಯನಗರ ಜಿಲ್ಲೆ ರಚನೆ ನನ್ನ ಮೊದಲ ಆದ್ಯತೆಯಾಗಿದೆ. ಬಳ್ಳಾರಿ ಜಿಲ್ಲೆಯ 11 ತಾಲೂಕುಗಳನ್ನು ಬೇರ್ಪಡಿಸಿ, ಪ್ರತ್ಯೇಕ ಜಿಲ್ಲೆ ರಚಿಸಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next