Advertisement

ಶಾಸಕರ ಫೈಟ್; ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ; CM ಕುಮಾರಸ್ವಾಮಿ

09:23 AM Jan 23, 2019 | Sharanya Alva |

ಬೆಂಗಳೂರು:ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಮಾತೇ ಇಲ್ಲ. ಸಣ್ಣ ಅಚಾತುರ್ಯದಿಂದ ಘಟನೆ ನಡೆದಿರೋದು ನಿಜ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಈಗಲ್ಟನ್ ರೆಸಾರ್ಟ್ ನಲ್ಲಿ ಮೊನ್ನೆ ರಾತ್ರಿ ಕಂಪ್ಲಿ ಶಾಸಕ ಗಣೇಶ್ ತಮ್ಮದೇ ಪಕ್ಷದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಏತನ್ಮಧ್ಯೆ ರಾಮನಗರ ಪೊಲೀಸರು ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಕುರಿತು ಕುಮಾರಸ್ವಾಮಿ ಅವರಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ, ಈಗಾಗಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ರೀತಿಯ ರಕ್ಷಣೆಯಾಗಲಿ, ಅಧಿಕಾರ ದುರುಪಯೋಗ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಸಿಎಂ ಬುದ್ದಿವಂತ, ಕಾಂಗ್ರೆಸ್ ನವರು ಬೆತ್ತಲೆಯಾಗಿದ್ದಾರೆ: ರೇಣುಕಾಚಾರ್ಯ

Advertisement

ಮುಖ್ಯಮಂತ್ರಿ ಕುಮಾರಸ್ವಾಮಿ ಬುದ್ದಿವಂತರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರನ್ನು ಬೆತ್ತಲೇ ಮಾಡಿ ತಾವು ಸೇಫ್ ಆಗಿದ್ದಾರೆ. ಕಾಂಗ್ರೆಸ್ ಶಾಸಕರ ಈ ಹೊಡೆದಾಟ ರಾಜ್ಯಕ್ಕೊಂದು ಕಪ್ಪು ಚುಕ್ಕೆ ಎಂದು ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next