Advertisement

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆಯಿಲ್ಲ:ದೆಹಲಿಯಲ್ಲಿ ಎಚ್‌ಡಿಡಿ 

02:20 PM Jun 28, 2018 | Team Udayavani |

ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾವನೆಗಳನ್ನು ಹೇಳಿಕೊಂಡಿದ್ದು, ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ  ಎಚ್‌.ಡಿ . ದೇವೇಗೌಡ ಹೇಳಿಕೆ ನೀಡಿದ್ದಾರೆ. 

Advertisement

ದೆಹಲಿ ಕರ್ನಾಟಕ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್‌ -ಜೆಡಿಎಸ್‌ ನಡುವೆ ನಡೆದ ಒಪ್ಪಂದದ ಪ್ರಕಾರವೇ ಸರ್ಕಾರ ನಡೆಯುತ್ತದೆ. ಆ ಬಗ್ಗೆ ರಾಹುಲ್‌ ಗಾಂಧಿ ಮತ್ತು  ಕುಮಾರಸ್ವಾಮಿ ಅವರು ಮಾತನಾಡುತ್ತಾರೆ ಎಂದರು. 

ರಾಜ್ಯದಲ್ಲಿ ನಾವು ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸೇತರ ಮೈತ್ರಿಯ ಕುರಿತು ಯೋಚನೆ ಇಲ್ಲ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆಗಿನ ಮೈತ್ರಿ ಕೂಟದಲ್ಲಿ ಬಿಎಸ್‌ಪಿಯೂ ಇರಲಿದೆ. ಜೆಡಿಎಸ್‌ ಕೋಟಾದ ಒಂದು ಸ್ಥಾನ ಬಿಎಸ್‌ಪಿಗೆ ಬಿಟ್ಟು ಕೊಡುವುದಾಗಿ ಹೇಳಿದರು. 

ಲೊಕಸಭಾ ಚುನಾವಣೆ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲೇ ನಡೆಯಬಹುದು. ಬಿಜೆಪಿ ಭಾರೀ ಸಿದ್ದತೆ ನಡೆಸುತ್ತಿದೆ. ಎನ್‌ಡಿಎ ಮಿತ್ರ ಪಕ್ಷಗಳು ಒಡೆದು ಹೋಗಿವೆ ಎಂದು ತಿಳಿದುಕೊಳ್ಳುವುದು ಬೇಡ ಎಂದರು. 

ನಾನು ಮಂಡ್ಯದಿಂದ ಸ್ಪರ್ಧಿಸುವಂತೆ ಚರ್ಚೆಯಾಗಿದೆ.ಸಣ್ಣ ಪುಟ್ಟ ಗೊಂದಲಗಳಿದ್ದು ಅವುಗಳು ಬಗೆ ಹರಿದ ಬಳಿಕ ಮಾತುಕತೆ ನಡೆಸುವುದಾಗಿ ತಿಳಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next