Advertisement

ಭಯೋತ್ಪಾದನ ಚಟುವಟಿಕೆಗಳಿಗೆ ಆಸ್ಪದವಿಲ್ಲ!

09:29 AM Nov 06, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯದಂತೆ, ಶಂಕಿತರು ಆಶ್ರಯ ಪಡೆಯದಂತೆ ಪೊಲೀಸ್‌ ಇಲಾಖೆ ಕಟ್ಟೆಚ್ಚರ ವಹಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

Advertisement

ಭಯೋತ್ಪಾದನ ಚಟುವಟಿಕೆಗಳಿಗೆ ರಾಜ್ಯದಲ್ಲಿ ಆಸ್ಪದ ನೀಡದಂತೆ ರಾಜ್ಯ ಆಂತರಿಕ ಭದ್ರತಾ ದಳ, ಉಗ್ರ ನಿಗ್ರಹ ಘಟಕ ಅಲ್ಲದೆ ಜಿಲ್ಲಾ ಪೊಲೀಸ್‌ ವಿಭಾಗಗಳು ಸಶಕ್ತ ರೀತಿಯಲ್ಲಿ ಕೆಲಸ ಮಾಡುತ್ತಿವೆ. ಕೇಂದ್ರ ತನಿಖಾ ಸಂಸ್ಥೆಗಳ ಜತೆಗೂ ನಿರಂತರ ಸಂಪರ್ಕದಲ್ಲಿದ್ದು, ಈ ಹಿಂದೆ ಹಲವು ಉಗ್ರರ ಬಂಧನದ ವೇಳೆಯೂ ಪ್ರಮುಖ ಪಾತ್ರ ವಹಿಸಿವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಅಷ್ಟೇ ಅಲ್ಲದೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಪ್ರತಿ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಉಗ್ರ ನಿಗ್ರಹ ಘಟಕ (ಎಟಿಎಸ್‌) ಅಗತ್ಯವಿದೆ. ಹೀಗಾಗಿ ಎಟಿಎಸ್‌ ಘಟಕಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next