Advertisement

ಯೂರಿಯಾ ಗೊಬ್ಬರ ಕೊರತೆಯಿಲ್ಲ

04:34 PM Jul 10, 2020 | Suhan S |

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್‌ (ಫುಲ್‌ ರೇಕ್‌) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ ರೈತರಿಗೆ ಸಿಗಲಿದೆ ಎಂದು ಹೇಳಿದ್ದಾರೆ. ಉಭಯ ತಾಲೂಕುಗಳಲ್ಲಿ ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಅರಿಷಿನ ಬೆಳೆಗಳಿವೆ. ಶೇ 90 ರಷ್ಟು ಪ್ರದೇಶವು ನೀರಾವರಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 45,600 ಹೆಕ್ಟೇರ್‌ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಪ್ರಸ್ತುತ ಶೇ. 78 ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. 35,568 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದೆ. ಈಗಾಗಲೇ ಬಿತ್ತನೆಯಾದ ಸೊಯಾಬಿನ್‌, ಮೆಕ್ಕೆಜೋಳ, ಕಬ್ಬು ಬೆಳೆಗಳಿಗೆ ಯೂರಿಯಾ ಗೊಬ್ಬರವನ್ನು ಮೇಲು ಗೊಬ್ಬರವಾಗಿ ಉಪಯೋಗಿಸುತ್ತಿದ್ದು, ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಗೆ ಈ ಹಂಗಾಮಿನಲ್ಲಿ ಎಪ್ರೀಲ್‌ ನಿಂದ ಸೆಪ್ಟೆಂಬರವರೆಗೆ 11850 ಮೆ.ಟನ್‌ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು, ಜುವಾರಿ, ಆರ್‌ಸಿಎಫ್‌, ಇಫ್ರೊ, ಕ್ರಿಬ್ರೋ ಕಂಪನಿಗಳ ಯೂರಿಯಾವನ್ನು ರೈತರಿಗೆ, ಪಿಕೆಪಿಎಸ್‌ ಹಾಗೂ ರಸಗೊಬ್ಬರ ಮಳಿಗೆಗಳಿಗೆ ಪೂರೈಸುವಂತೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next