Advertisement

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

12:38 AM Apr 20, 2024 | Team Udayavani |

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಹಿಂದೂಗಳ ಮೇಲೆ ನಿರಂತರ ದಾಳಿ, ದೌರ್ಜನ್ಯ ನಡೆಯುತ್ತಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಆರೋಪಿಸಿದರು.

Advertisement

ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿದ ರೀತಿಯನ್ನು ಕಂಡರೆ ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆಯನ್ನು ಓಟಿಗಾಗಿ ಒಂದು ಸಮುದಾಯಕ್ಕೆ ಮಾರಿದಂತಿದೆ. ಹತ್ತು ತಿಂಗಳಲ್ಲಿ ಉಡುಪಿಯಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ, ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ, ಹನುಮಾನ್‌ ಚಾಲೀಸ್‌ ಹಾಕಿದ ಯುವಕನ ಮೇಲೆ ಹಲ್ಲೆ, ಜೈ ಶ್ರೀರಾಮ್‌ ಘೋಷಣೆ ಕೂಗಿದ ಯುವಕರಿಗೆ ಹಲ್ಲೆ, ನಟಿ ಹರ್ಷಿಕಾ ಪೂಣಚ್ಚ ಮೇಲೆ ದಾಳಿಯಂಥ ಘಟನೆಗಳು ನಡೆದ್ದಿದು, ಹಿಂದೂ ಸಮುದಾಯವನ್ನು ಆತಂಕಕ್ಕೀಡು ಮಾಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next