Advertisement

Hubli; ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ: ಸಚಿವ ಡಿ. ಸುಧಾಕರ

04:34 PM Jul 14, 2024 | Team Udayavani |

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದ ಜನತೆಗೆ ತಿಳಿಸಿದ್ದಾರೆ ಎಂದು ಸಚಿವ ಡಿ. ಸುಧಾಕರ ಹೇಳಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡುತ್ತಿದ್ದಾರೆ. ಅವರಿಗೆ ಬೇರೆ ಏನು ಕೆಲಸವಿಲ್ಲ. ಸಿಎಂ ರಾಜಕೀಯ ಇತಿಹಾಸದಲ್ಲಿ ಕಳಂಕ ರಹಿತವಾಗಿ ಹೊರಗೆ ಬಂದವರು. ಅವರು ಯಾವುದೇ ಒಂದು ಜಾಗದ ವಿಚಾರದಲ್ಲಿ ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಮಾಡುತ್ತಿರುವ ಆರೋಪ ಸರಿಯಲ್ಲ ಎಂದರು.

ಮುಖ್ಯಮಂತ್ರಿಗಳು ಮುಡಾ ಸರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿ ಬಿಜೆಪಿ ಕಾಲದಲ್ಲಿ ಹಗರಣವಾಗಿದೆ ಎಂದರು.

ವಾಲ್ಮೀಕಿ ಹಗರಣದಲ್ಲಿ ಎಸ್‌ಐಟಿ ತನಿಖೆ ವೇಳೆ ಇಡಿ ಪ್ರವೇಶ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಈ ಕುರಿತು ತನಿಖೆ ನಡೆಯುತ್ತಿದೆ. ಇದು ಬ್ಯಾಂಕ್ ಹಾಗೂ ಕಾರ್ಪೋರೇಷನ್‌ ಗೆ ಸಂಬಂಧಿಸಿದ್ದು. ನಾಗೇಂದ್ರ ಅವರ ಗಮನಕ್ಕೆ ಇದು ಬಂದಿರಲಿಲ್ಲ. ಇಡಿ ಅಥವಾ ಸಿಬಿಐಯಾದರು ವಿಚಾರಣೆ ಮಾಡಲಿ. ರಾಜ್ಯ ಸರ್ಕಾರ ಎಸ್ಐಟಿ ನೇಮಕ ಮಾಡಿದೆ. ಅವರು ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಹೆಚ್ಚಿಗೆ ನಾನು ಏನು ಮಾತನಾಡಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next