Advertisement

ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ಸಾ.ರಾ.ಮಹೇಶ್‌ 

01:22 AM Feb 23, 2019 | Team Udayavani |

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ಕಾಂಗ್ರೆಸ್‌ ಶಾಸಕರು ಈ ರೀತಿ ಸಿದ್ದರಾಮಯ್ಯ ಅವರನ್ನು ಓಲೈಸುವ ಮಾತುಗಳನ್ನು ನಿಲ್ಲಿಸ ಬೇಕೆಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣ ರಾವ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

Advertisement

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಇರುತ್ತಾರೆಂದು ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷಗಳ ರಾಷ್ಟ್ರಮಟ್ಟದ ನಾಯಕರ ಸಮ್ಮುಖದಲ್ಲಿ ತೀರ್ಮಾನವಾಗಿದೆ. ಅದರಂತೆ ಸರ್ಕಾರ ಮುಂದುವರಿಯ
ಲಿದೆ. ಸಮ್ಮಿಶ್ರ ಸರ್ಕಾರದ ವಿಚಾರ ಕುರಿತಂತೆ ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಿರುವುದರಿಂದ ನಾವು ಏನನ್ನೂ ಮಾತನಾಡಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next