Advertisement
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಈಗಲೇ ಕಿತ್ತಾಟ ಆರಂಭಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಸಿಎಂ ಆಗಬೇಕೆಂದು ಇನ್ಯಾರೋ ಹಂಬಲಿಸುತ್ತಿದ್ದಾರೆ. ಅವರು ಹಂಬಲಿಸುತ್ತಲೇ ಇರಲಿ. ಚುನಾವಣೆ ಆಗುವ ವರೆಗೂ ಅವರ ಮಾತಿನ ಚಟ ತೀರಿಸಿಕೊಳ್ಳಲಿ ಎಂದು ಕುಟುಕಿದರು.
Related Articles
Advertisement
ಬಿಜೆಪಿ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಚುನಾವಣೆ ಸ್ಪರ್ಧೆಯಿಂದ ರಾಜಕೀಯ ನಿವೃತ್ತಿ ನಿಯಮ ರೂಪಿಸಲಾಗಿದೆ ಅವಕಾಶವಿಲ್ಲ. ಯಡಿಯೂರಪ್ಪ ಅವರಿಗೆ 80 ವರ್ಷ ವಯಸ್ಸಾಗಿದೆ. ಹೀಗಾಗಿ ರಾಜಕೀಯ ನಿವೃತ್ತಿ ಹಂತದಲ್ಲಿ ತಮ್ಮ ಕ್ಷೇತ್ರದಲ್ಲಿ ಪುತ್ರ ವಿಜಯೇಂದ್ರ ಅವರಿಗೆ ಅವಕಾಶ ಕೊಡಿ ಎಂದು ಯಡಿಯೂರಪ್ಪ ಹೇಳಿದ್ದರಲ್ಲಿ ಯಾವ ತಪ್ಪಿಲ್ಲ ಎಂದು ಸಮರ್ಥಿಸಿದರು.
ಯಡಿಯೂರಪ್ಪ ಅವರು ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದರೂ, ಅವರಲ್ಲಿ ಇನ್ನೂ ಪಕ್ಷಕ್ಕಾಗಿ ದುಡಿಯುವ ತಾಕತ್ತಿದೆ. ಆದರೂ ಪಕ್ಷದ ನಿಯಮಕ್ಕೆ ಬದ್ಧವಾಗಿ ರಾಜಕೀಯ ನಿವೃತ್ತಿ ಘೋಷಿಸಿ, ಮಗ ವಿಜೇಂದ್ರ ಅವರನ್ನು ರಾಜಕೀಯವಾಗಿ ಬೆಳೆಸಲು ಕ್ಷೇತ್ರವನ್ನ ಮಗನಿಗೆ ಬಿಟ್ಟುಕೊಟ್ಟಿದ್ದಾರೆ ಎಂದರು.
ಇನ್ನು ಬಿಜೆಪಿ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂಬ ಚರ್ಚೆ ಸಹಜವೇ. ಆದರೆ ನಾನೂ ಕುಟುಂಬ ರಾಜಕಾರಣದ ಹಿನ್ನೆಲೆಯಿಂದ ಬಂದಿದ್ದೇನೆ. ಹಾಗಾಗಿ ಕುಟುಂಬ ರಾಜಕಾರಣ ಇರುವುದು ಸಹಜ. ಪ್ರಧಾನಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣ ವಿಷಯದಲ್ಲಿ ಅಪವಾದ ಎನಿಸಿದ್ದಾರೆ ಎಂದರು.