Advertisement

ರಾಮನಗರದಲ್ಲಿ ಸ್ಪರ್ಧೆಗೆ ಒತ್ತಡವಿದೆ: ನಿಖೀಲ್‌ 

06:00 AM Oct 05, 2018 | Team Udayavani |

ಮಂಡ್ಯ: ರಾಮನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆಗಿಳಿಯುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಆದರೆ, ಈ ಬಗ್ಗೆ ಪಕ್ಷದ ವರಿಷ್ಠರಾದ ದೇವೇಗೌಡರ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಪುತ್ರ, ಚಿತ್ರ ನಟ ನಿಖೀಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ರಾಮನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆಗಿಳಿ ಯುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಜೊತೆಗೆ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆಗೂ ಒತ್ತಡವಿದೆ. ಆದರೆ, ಚುನಾವಣೆಗಳಲ್ಲಿ ಸ್ಪರ್ಧಿಸುವ ವಿಚಾರ ದಲ್ಲಿ ನಾನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠ ರಾದ ದೇವೇಗೌಡರ ತೀರ್ಮಾನವೇ ಅಂತಿಮವಾಗಿರುತ್ತದೆ. ನಾನೂ ಸೇರಿದಂತೆ ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗ ಬೇಕು. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ, ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next