Advertisement

Lok Sabha Elections: ಹಾಲಿ ಸಂಸದರಿಗೆ ಟಿಕೆಟ್‌ ತಪ್ಪಲಿದೆ ಎನ್ನುವುದು ಉಹಾಪೋಹ: ಜೋಶಿ

08:15 PM Mar 09, 2024 | Shreeram Nayak |

ಶಿವಮೊಗ್ಗ: ಹಾಲಿ ಸಂಸದರಿಗೆ ಟಿಕೆಟ್‌ ತಪ್ಪಲಿದೆ ಎಂಬುದು ಉಹಾಪೋಹ. ಆ ರೀತಿ ಯಾವುದೇ ಪ್ರಕ್ರಿಯೆ ಇಲ್ಲ. ಗೆಲ್ಲುವ ಅಭ್ಯರ್ಥಿಗಳು ಹಾಗೂ ಪಕ್ಷ ನಿಷ್ಠರಿಗೆ ಟಿಕೆಟ್‌ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್‌ ಹಂಚಿಕೆ ಪಕ್ಷದ ಪ್ರಕ್ರಿಯೆ. ಇದರಲ್ಲಿ ಯಾವುದೇ ಕಸರತ್ತು ಇಲ್ಲ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಈಗಾಗಲೇ 195 ಅಭ್ಯರ್ಥಿಗಳ ಘೋಷಣೆ ಆಗಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳನ್ನು ಗಮನಿಸಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡ್ತಾರೆ. ಐತಿಹಾಸಿಕ ದಾಖಲೆ ವಿಜಯವನ್ನು ಈ ಬಾರಿ ನಾವು ಪಡೆಯಲಿದ್ದೇವೆ ಎಂದರು.

ದೇಶದಲ್ಲಿ 370ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲ್ಲಿದೆ. ಅಭೂತ ಪೂರ್ವ ಬದಲಾವಣೆ ತರುತ್ತೇವೆ. ಜಾಗತಿಕ ಮಟ್ಟದಲ್ಲಿ ಭಾರತ 5ನೇ ಸ್ಥಾನದಲ್ಲಿ ಇದೆ. 3ನೇ ಸ್ಥಾನಕ್ಕೆ ತರುವ ಮೂಲಕ ಭಾರತ ಅಭಿವೃದ್ಧಿಶೀಲ ರಾಷ್ಟ್ರ ಆಗಲಿದೆ ಎಂದರು.

ಸಿದ್ದರಾಮಯ್ಯ ಸರಕಾರದಲ್ಲಿ ತುಷ್ಟೀಕರಣ ರಾಜಕಾರಣ ನಡೆಯುತ್ತಿದೆ. ಪಾಕಿಸ್ತಾನ ಜಿಂದಾಬಾದ್‌ ಅಂದವರಿಗೆ ರಕ್ಷಣೆ ಇದೆ. ಹಿಂದೂಸ್ತಾನ್‌ ಜಿಂದಾಬಾದ್‌ ಅಂದವರಿಗೆ ಶಿಕ್ಷೆಯಾಗುತ್ತಿದೆ. ಇದು ಸಿದ್ದರಾಮಯ್ಯ ಧೋರಣೆ. ಜನ ಇದನ್ನು ಗಮನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಳೆದ ಬಾರಿ 26 ಸ್ಥಾನ ಗೆದ್ದಿದ್ದೆವು. ಈ ಬಾರಿ 28 ಸ್ಥಾನ ಗೆಲ್ಲುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next