Advertisement

ಬೇರೆ ಮಾರ್ಗವೇ ಇರಲಿಲ್ಲ: ಗಂಗೂಲಿ

09:53 AM Mar 14, 2020 | Sriram |

ಕೋಲ್ಕತಾ: ಐಪಿಎಲ್‌ ಪಂದ್ಯಾವಳಿಯನ್ನು ಮುಂದೂಡದೇ ಬೇರೆ ಮಾರ್ಗವೇ ಇರಲಿಲ್ಲ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.

Advertisement

“ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ. ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ನಾವೆಲ್ಲ ನೋಡುತ್ತಿದ್ದೇವೆ. ಐಪಿಎಲ್‌ ಪಂದ್ಯಾವಳಿಯನ್ನು ಮುಂದೂಡುವುದೊಂದೇ ನಮ್ಮ ಮುಂದಿರುವ ಮಾರ್ಗವಾಗಿತ್ತು’ ಎಂಬುದಾಗಿ ಗಂಗೂಲಿ ಹೇಳಿದರು.

ಈ ನಿರ್ಧಾರದಿಂದ ಐಪಿಎಲ್‌ ಫ್ರಾಂಚೈಸಿಗಳಿಗೆ ಸಂತೋಷವಾಗಿದೆಯೇ ಎಂಬ ಪ್ರಶ್ನೆಗೂ “ಯಾರಲ್ಲೂ ಬೇರೆ ಆಯ್ಕೆಗಳೇ ಇರಲಿಲ್ಲ’ ಎಂದು ಉತ್ತರಿಸಿದರು. ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಯನ್ನು ನಾವು ಪಾಲಿಸುವುದು ಅನಿವಾರ್ಯ ಎಂದೂ ಗಂಗೂಲಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next