Advertisement

ಸ್ಪಷ್ಟ ಬಹುಮತಕ್ಕಿಂತ ಒಂದಷ್ಟು ಸ್ಥಾನ ಹೆಚ್ಚು ಬರಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ

06:14 PM May 05, 2023 | Team Udayavani |

ಮೈಸೂರು: ವರುಣ ಬಹಳ ಉತ್ತಮಗೊಂಡಿದೆ. ಎಲ್ಲಾ ವರ್ಗದ ಜನರು ನಮ್ಮ ಪರವಾಗಿದ್ದಾರೆ. ನಮಗೆ ಬಹಳ ಉತ್ತಮವಾದ ಸಂಖ್ಯೆ ಬರುವ ನಿರೀಕ್ಷೆಯಿದೆ. ಸ್ಪಷ್ಟ ಬಹುಮತಕ್ಕಿಂತ ಒಂದಷ್ಟು ಸ್ಥಾನ ಹೆಚ್ಚಾಗಿಯೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ರಾಜ್ಯದ ಹನುಮ ದೇವಾಲಯಗಳ ಅಭಿವೃದ್ಧಿ ಮಾಡ್ತಿವಿ ಎಂಬ ಕಾಂಗ್ರೆಸ್ ಭರವಸೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎಂಬುದಕ್ಕೆ ಈ ಭರವಸೆಯೆ ಸಾಕ್ಷಿ. ಮೊದಲು ತಪ್ಪು ಮಾಡುವುದು ನಂತರ ಅದಕ್ಕೆ ಓವರ್ ರಿಯಾಕ್ಟ್ ಮಾಡುವುದು ಎರಡೂ ತಪ್ಪು. ಈ ಕೆಲಸವನ್ನು ಈಗ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ನ ಮಾತುಗಳಲ್ಲಿ ಅಪ್ರಾಮಾಣಿಕತೆ ಮತ್ತು ಅಭದ್ರತೆ ಎದ್ದು ಕಾಣುತ್ತಿದೆ ಎಂದರು.

ಸಿದ್ದರಾಮಯ್ಯ ಮೊದಲು ಒಂದೇ ದಿನ ಕ್ಷೇತ್ರಕ್ಕೆ ಬರ್ತಿನಿ ಅಂದರು. ಈಗ ಸ್ಟಾರ್ ಗಳ ಸಮೇತ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದ ಅವರು, ಲಿಂಗಾಯತರ ವಿಚಾರದಲ್ಲಿ ಸಿದ್ದರಾಮಯ್ಯ ಸ್ಪಷ್ಟೀಕರಣಕ್ಕೂ ತಿರುಗೇಟು ನೀಡಿ, ಮೊದಲು ಡ್ಯಾಮೇಜ್ ಮಾಡುವುದು ನಂತರ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನಿಸುವುದು. ಇದೆಲ್ಲಾ ಈಗ ನಡೆಯಲ್ಲ. ಕ್ಯಾಮರಾ ಇರುವುದರಿಂದ ಜನರು ಎಲ್ಲವನ್ನೂ ನೋಡುತ್ತಾರೆ. ಈಗ ಸ್ಪಷ್ಟೀಕರಣಕ್ಜೆ ಬೆಲೆ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next