Advertisement

ಹಳೆಯಂಗಡಿಯಲ್ಲಿ ದಿನಸಿ ಅಂಗಡಿಗೆ ನುಗ್ಗಿ ಕಳವು : ಪೊಲೀಸರಿಂದ ಪರಿಶೀಲನೆ

10:26 AM Dec 12, 2020 | sudhir |

ಹಳೆಯಂಗಡಿ: ಇಲ್ಲಿನ ಹಳೆಯಂಗಡಿ ಒಳಪೇಟೆಯ ಮಾರುಕಟ್ಟೆ ರಸ್ತೆಯಲ್ಲಿನ ದಿನಸಿ ಅಂಗಡಿಯೊಂದರಲ್ಲಿ ಕಳವು ಮಾಡಿದ ಪ್ರಕರಣ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

Advertisement

ಮುದ್ದು ಸಾಲಿಯಾನ್ ಅವರ ಅಂಗಡಿಯ ಹೆಂಚುಗಳನ್ನು ತೆಗೆದು, ಮರದ ಮೇಲ್ಛಾವಣಿಯನ್ನು ಮುರಿದು ಒಳ ನುಗ್ಗಿರುವ ಕಳ್ಳುರು ಮಾರಾಟದ ವಸ್ತುಗಳನ್ನೇಲ್ಲಾ ಚೆಲ್ಲಾಪಿಲ್ಲಿ ಮಾಡಿ ಟೇಬಲ್‌ನ ಡ್ರಾಯರ್‌ನಿಂದ ನಗದು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ಅಂಗಡಿ ಬಂದ್ ಮಾಡಿ ಶನಿವಾರ ಬೆಳಿಗ್ಗೆ ಬಾಗಿಲು ತೆಗೆದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮೂಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next