Advertisement
ನಾಗಮಂಗಲ ತಾಲೂಕಿನ ಚಾಕೇನಹಳ್ಳಿ ಗ್ರಾಮದ ಹಾಲಿ ವಾಸ ಮಂಡ್ಯ ನಗರದ ಚಾಮುಂಡೇಶ್ವರಿ ನಗರದ ರವಿಕುಮಾರ್.ಸಿ, ಮಂಡ್ಯ ತಾಲೂಕಿನ ಸೂನಗಹಳ್ಳಿ ಗ್ರಾಮದವರಾದ ಮಂಜುನಾಥ, ವಿಷ್ಣು.ಸಿ, ಹೇಮಂತ್ ಕುಮಾರ್.ಎಸ್.ವಿ ಬಂತ ಆರೋಪಿಗಳು. ಬಂತರಿಂದ 35.86 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಸೇರಿದಂತೆ ಇತರೆ ವಸ್ತು ವಶಪಡಿಸಿಕೊಳ್ಳಲಾಗಿದೆ.
Related Articles
Advertisement
ಆರೋಪಿಗಳಿಂದ 154 ಗ್ರಾಂ ಚಿನ್ನ, 20 ಕೆಜಿ ಬೆಳ್ಳಿ ಪದಾರ್ಥಗಳು, 1 ಅಶೋಕ ಲೈಲ್ಯಾಂಡ್ ವಾಹನ, 1 ಎರಿಟಿಕಾ ಕಾರು, 1 ಯಮಹಾ ಆರ್ಎಕ್ಸ್ ಬೈಕ್, 1 ಲ್ಯಾಪ್ಟಾಪ್, 8 ಎಚ್ಎಫ್ ಇಲಾತಿ ಹಸು ಗಳು, 1 ಸಿಲಿಂಡರ್, ಆಕ್ಸಿಜನ್ ಸಿಲಿಂಡರ್, ವಾಟರ್ ಟ್ಯಾಂಕ್, ಗ್ಯಾಸ್ ಕಟರ್, 40 ಸಾವಿರ ರೂ. ನಗದು ಸೇರಿದಂತೆ ಒಟ್ಟು 35.86 ಲಕ್ಷ ರೂ. ಮೌಲ್ಯದ್ದಾಗಿದೆ.
ಆರೋಪಿ ರವಿಕುಮಾರ್ ಈ ಹಿಂದೆ ಶಾಲೆಗಳಲ್ಲಿ ಕಂಪ್ಯೂಟರ್ ಕಳವು ಮಾಡಿದ 18 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ ಆಗಸ್ಟ್ನಲ್ಲಿ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಹೊಳಲು- ಆಕ್ಕಿಹೆಬ್ಟಾಳು ಮುಖ್ಯ ರಸ್ತೆಯ ಲೀಲಾ ಬ್ಯಾಂಕರ್ಸ್ ಅಂಡ್ ಜ್ಯುವೆಲ್ಲರಿ ಶಾಪ್ನಲ್ಲಿ ಕಳ್ಳರು ಅಂಗಡಿಯ ಹಿಂಭಾಗದಲ್ಲಿದ್ದ ವೆಂಟಿಲೇಟರ್ ಸರಳನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಗೋಡೆ ಕೊರೆದು ನುಗ್ಗಿ ಶೋಕೇಸ್ನಲ್ಲಿ ವ್ಯಾಪಾರಕ್ಕೆಂದು ಇಟ್ಟಿದ್ದ ಬೆಳ್ಳಿಯ ಪದಾರ್ಥಗಳನ್ನು ಕಳ್ಳತನ ಮಾಡಿದ್ದರು. ಕೆ.ಆರ್.ಪೇಟೆ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಮತ್ತು ಮಾಲು ಪತ್ತೆ ಬಗ್ಗೆ ಪೊಲೀಸರ ತಂಡವನ್ನು ರಚನೆ ಮಾಡಲಾಗಿತ್ತು. ಪೊಲೀಸರ ತಂಡ ನಾಗಮಂಗಲ ತಾಲೂಕು ಬೆಳ್ಳೂರು ಕ್ಲಾಸ್ನ ಉಮರ್ ನಗರದ ಬಳಿ ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಹೆಚ್ಚಿನ ತನಿಖೆ ಸಂಬಂಧ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದಾಗ ಆರೋಪಿಗಳು 11 ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದರು.
ನಾಗಮಂಗಲ ಆರಕ್ಷಕ ಉಪ ಅಧೀಕ್ಷಕ ಲಕ್ಷ್ಮೀನಾರಾಯಣ ಪ್ರಸಾದ್ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದೀಪಕ್, ಜಗದೀಶ್ ಪಿಎಸ್ಐ ಸುನಿಲ್, ಸಿದ್ದಲಿಂಗ ಬಾಣಸೆ, ಮತ್ತು ಸಿಬ್ಬಂದಿಗಳಾದ ಚಂದ್ರಶೇಖರ್ ಎ.ಎಸ್.ಐ. ಬಸವರಾಜು, ರಘು, ಜಯವರ್ಧನ್, ಜೀಸನ್, ಉಮೇಶ್, ಅರುಣ್ ಕುಮಾರ್, ಅವಿನಾಶ್, ಮಂಜು, ಪ್ರದೀಪ, ಪ್ರದೀಪ ಎನ್.ಎಲ್, ರವಿಕಿರಣ್, ಲೋಕೇಶ್, ಉಮೇಶ್, ಷರೀಫ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧನ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಈ.ತಿಮ್ಮಯ್ಯ ಇದ್ದರು.
ಕದ್ದ ಜಾನುವಾರುಗಳಿಂದಲೇ ಫಾರಂ ಮಾಡಿದ್ದ ಆರೋಪಿ: ಚಾಕೇನಹಳ್ಳಿಯ ರವಿಕುಮಾರ್ ಕದ್ದ ಜಾನುವಾರುಗಳಿಂದಲೇ ಬೆಳ್ಳೂರು ಬಳಿ ಫಾರಂ ಮಾಡಿದ್ದನು. ಕದ್ದ ಹಸು, ಎಮ್ಮೆಗಳನ್ನು ಇಲ್ಲಿಯೇ ಬಿಟ್ಟಿದ್ದು, ಹಂತ ಹಂತವಾಗಿ ಮಾರಾಟ ಮಾಡುತ್ತಿದ್ದ. ಅಲ್ಲದೆ, ಕದ್ದ ಹಸುಗಳಿಗೆ ಮೇವಿಗಾಗಿ ಫಿಡ್ಸ್ಗಳನ್ನು ಕದಿಯುತ್ತಿದ್ದರು. ಹಗಲು ವೇಳೆ ಕಳ್ಳತನಕ್ಕೆ ಪ್ಲ್ಯಾನ್ ಮಾಡುತ್ತಿದ್ದ ಖತರ್ನಾಕ್ ತಂಡ, ರಾತ್ರಿ ವೇಳೆ ಹಸು, ಎಮ್ಮೆಗಳನ್ನು ಕದಿಯುತ್ತಿದ್ದರು. ತಿಂಗಳ ಹಿಂದೆ ಹಲಗೂರು, ಚನ್ನಪಟ್ಟಣ, ಚನ್ನರಾಯಪಟ್ಟಣ ಸೇರಿದಂತೆ ವಿವಿಧ ಭಾಗಗಳಲ್ಲಿನ ರೈತರ ಹಸುಗಳನ್ನು ಕದ್ದು ತಂದು ಫಾರಂನಲ್ಲಿಟ್ಟಿದ್ದರು. ನಂತರ ಹಂತ ಹಂತವಾಗಿ ಬೇರೆಯವರಿಗೆ ಮಾರಾಟ ಮಾಡುತ್ತಿದ್ದರು. ಕಳ್ಳತನವಾಗಿದ್ದ ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡು ಹಸುಗಳ ಮಾಲೀಕರಿಗೆ ನೀಡಿದ್ದಾರೆ.