Advertisement

ಜಗಳೂರು: ಎಟಿಎಂ ಒಡೆದು ಹಣ ದೋಚಿದ ಖದೀಮರು

11:52 AM Sep 19, 2022 | Team Udayavani |

ದಾವಣಗೆರೆ: ಖಾಸಗಿ ಬ್ಯಾಂಕ್ ನ ಎಟಿಎಂ ಒಡೆದು ಹಣ ದೋಚಿರುವ ಪ್ರಕರಣ ಭಾನುವಾರ ರಾತ್ರಿ ಜಗಳೂರಿನಲ್ಲಿ ನಡೆದಿದೆ.

Advertisement

ದಾವಣಗೆರೆ, ಚಳ್ಳಕೆರೆ ರಸ್ತೆಯಲ್ಲಿ ಖಲಂದರ್ ಕಿರಾಣಿ ಅಂಗಡಿ ಪಕ್ಕದಲ್ಲಿರುವ ಬ್ಯಾಂಕ್ ಎಟಿಎಂ ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ.

ಸೋಮವಾರ ಬೆಳಗ್ಗೆ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ. ಎಷ್ಟು ಹಣ ಕಳ್ಳತನವಾಗಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ:ಚಿಕ್ಕಮಗಳೂರು: ಮಗಳ ನಿಶ್ಚಿತಾರ್ಥದ ಊಟಕ್ಕೆಂದು ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದರು!

ಪಿಎಸ್ಐ ಮಹೇಶ್ ಹೊಸಪೇಟೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ಪರಿಶೀಲಿಸಿದರು. ಪ್ರಕರಣ ಸಂಬಂಧ ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ‌.

Advertisement

ಶ್ವಾನದಳ ಮತ್ತು ಬೆಳಚ್ಚು ತಜ್ಞರು ಭೇಟಿ ನೀಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next